ನಟ ವಿಶಾಲ್ 
ದೇಶ

ಪಕ್ಷೇತರ ಅಭ್ಯರ್ಥಿಯಾಗಿ ಆರ್ ಕೆ ನಗರ ಉಪಚುನಾವಣೆಗೆ ಸ್ಪರ್ಧಿಸಲಿರುವ ನಟ ವಿಶಾಲ್?

ಕಾಲಿವುಡ್ ನಟ ವಿಶಾಲ್ ತಮಿಳಿನಾಡಿನ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಕಾಲಿವುಡ್ ನಟ ವಿಶಾಲ್ ತಮಿಳಿನಾಡಿನ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. 
ಚಿತ್ರರಂಗದಲ್ಲಿರುವ ಭ್ರಷ್ಟಾಚಾರವನ್ನು ಹಾಗೂ ಸಿನಿಮಾದಲ್ಲಿ ರಾಜಕಾರಣಿಗಳು ಹಸ್ತಕ್ಷೇಪ ಮಾಡುವುದನ್ನು ವಿರೋಧಿಸುವ ನಟ ವಿಶಾಲ್, ಸೋಮವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಮೆರ್ಸಲ್ ಚಿತ್ರದ ಪೈರೆಟೆಡ್ ಆವೃತ್ತಿಯನ್ನು ವೀಕ್ಷಿಸಿದ್ದ ಬಿಜೆಪಿ ನಾಯಕ ಹೆಚ್ ರಾಜ ಅವರ ಕ್ರಮವನ್ನು ವಿಶಾಲ್ ತೀವ್ರವಾಗಿ ಖಂಡಿಸಿದ್ದರು. 
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ನಿಧನದಿಂದಾಗಿ ತೆರವುಗೊಂಡಿದ್ದ ಆರ್ ಕೆ ನಗರ ವಿಧಾನಸಭೆಗೆ ಡಿ.21 ರಂದು ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಎಐಎಡಿಎಂಕೆ ಇ ಮಧುಸೂಧನ್ ಅವರನ್ನು ಕಣಕ್ಕಿಳಿಸಿದ್ದರೆ ಡಿಎಂಕೆ ಮರುಧು ಗಣೇಶ್ ಅವರನ್ನು ಕಣಕ್ಕಿಳಿಸಿದೆ. ಇದೇ ವೇಳೆ ಎಐಎಡಿಎಂಕೆಯ ಬಂಡಾಯ ನಾಯಕ ಟಿಟಿವಿ ದಿನಕರನ್ ಸಹ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿಯಿಂದ ಕರು ನಾಗರಾಜನ್ ಹಾಗೂ ಜಯಲಲಿತಾ ಸೋದರ ಸಂಬಂಧಿ ದೀಪಾ ಜಯಕುಮಾರ್ ಸಹ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT