ಸಿಎಂ ಚಂದಜ್ರಬಾಬು ಅವರಿಗೆ ಸಿಹಿ ತಿನ್ನಿಸಿದ ಕಾಪು ಮುಖಂಡರು 
ದೇಶ

ಹೋರಾಟಕ್ಕೆ ಸಂದ ಜಯ: ಆಂಧ್ರ ವಿಧಾನಸಭೆಯಲ್ಲಿ ಕಾಪು ಮೀಸಲಾತಿ ಮಸೂದೆ ಅವಿರೋಧ ಅಂಗೀಕಾರ

ಕಾಪು ಸಮುದಾಯದ ಹೋರಾಟಕ್ಕೆ ಕೊನೆಗೂ ಮಣಿದ ಆಂಧ್ರ ಪ್ರದೇಶ ಸರ್ಕಾರ ಕಾಪು ಮೀಸಲಾತಿ ಮಸೂದೆಯನ್ನು ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಮಂಡಿಸಿದ್ದು ಮಾತ್ರವಲ್ಲದೇ ವಿಧಾನಸಭೆಯ ಅವಿರೋಧ ಅಂಗೀಕಾರ ಕೂಡ ಪಡೆದಿದೆ.

ಅಮರಾವತಿ: ಕಾಪು ಸಮುದಾಯದ ಹೋರಾಟಕ್ಕೆ ಕೊನೆಗೂ ಮಣಿದ ಆಂಧ್ರ ಪ್ರದೇಶ ಸರ್ಕಾರ ಕಾಪು ಮೀಸಲಾತಿ ಮಸೂದೆಯನ್ನು ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಮಂಡಿಸಿದ್ದು ಮಾತ್ರವಲ್ಲದೇ ವಿಧಾನಸಭೆಯ ಅವಿರೋಧ ಅಂಗೀಕಾರ ಕೂಡ ಪಡೆದಿದೆ.
ಮೂಲಗಳ ಪ್ರಕಾರ ಈ ಮಸೂದೆ ಅಂಗೀಕಾರದ ಮೂಲಕ ಕಾಪು ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ದೊರೆಯಲಿದ್ದು, ಆಂಧ್ರ ಪ್ರದೇಶ ಸರ್ಕಾರ ಒಟ್ಟಾರೆ ಮೀಸಲಾತಿ ಗಾತ್ರವನ್ನು ಶೇ.50ಕ್ಕೆ ಹಿಗ್ಗಿಸಿಕೊಂಡಂತಾಗಿದೆ. ಪ್ರಸ್ತುತ  ಕಾಪು ಮೀಸಲಾತಿ ಮಸೂದೆ ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಆಂಗೀಕಾರವಾಗಿದೆಯಾದರೂ ಮಸೂದೆಗೆ ಕೇಂದ್ರಸರ್ಕಾರದ ಅನುಮೋದನೆ ಅಗತ್ಯ. ಹೀಗಾಗಿ ಶೀಘ್ರದಲ್ಲೇ ಅಂಗೀಕಾರ ಮಸೂದೆಯನ್ನು ಆಂಧ್ರ ಪ್ರದೇಶ  ಸರ್ಕಾರ ಕೇಂದ್ರ ಸರ್ಕಾರಕ್ಕೆ ರವಾನಿಸಲಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿರುವ ಆಂಧ್ರ ಪ್ರದೇಶ ಸಿಎಂ ಎಂ ಚಂದ್ರಬಾಬು ನಾಯ್ಡು ಅವರು, ಪ್ರಸ್ತುತ ಯಶಸ್ವಿಯಾಗಿ ಸರ್ಕಾರದ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ, ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಅಂಗೀಕೃತ  ಮಸೂದೆಯನ್ನು ಅನುಮೋದನೆಗಾಗಿ ರವಾನಿಸಲಾಗುತ್ತದೆ. ಕೇಂದ್ರದ ಅನುಮೋದನೆಯೂ ದೊರೆತ ಬಳಿಕ ಮೀಸಲಾತಿ ಜಾರಿಯಾಗಲಿದೆ ಎಂದು ಹೇಳಿದರು.
ಇದಕ್ಕೂ ಮೊದಲು ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದ ಕಾಪು ಸಮುದಾಯದ ಮುಖಂಡರು ನಮಗೆ ರಾಜಕೀಯ ಮೀಸಲಾತಿ ಬೇಡ.. ಆದರೆ ಶೈಕ್ಷಣಿಕ ಮತ್ತು ವೃತ್ತಿ ಮೀಸಲಾತಿ ಮಾತ್ರ ಸಾಕು ಎಂದು  ಹೇಳಿದ್ದರು. ಹೀಗಾಗಿ ಅವರ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದು ಸಿಎಂ ನಾಯ್ಡು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಸಭೆ ಬಳಿಕ ಕಾಪು ಮುಖಂಡರು ಸಿಎಂ ಚಂದ್ರಬಾಬು ಅವರಿಗೆ ಸಿಹಿ ತಿನ್ನಿಸುವ ಮೂಲಕ ಸಂತಸ  ಹಂಚಿಕೊಂಡರು. 
ಮಸೂದೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಬಳಿಕ ಇನ್ನು ಮುಂದೆ ಆಂಧ್ರ ಪ್ರದೇಶದಲ್ಲಿ ಕಾಪು ಸಮುದಾಯದವರಿಗೆ ಶೈಕ್ಷಣಿಕವಾಗಿ ಮತ್ತು ಸರ್ಕಾರಿ ಹುದ್ದೆಗಳಲ್ಲಿ ಶೇ.5ರಷ್ಟು ಮೀಸಲಾತಿ ದೊರೆಯಲಿದೆ.
ಈ ಹಿಂದೆ ಕಾಪು ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವಂತೆ ಕಳೆದ ಜನವರಿ ತಿಂಗಳಲ್ಲಿ ಕಾಪು ನಾಯಕ ಮುದ್ರಗಡ ಪದ್ಮನಾಭಂ ನೇತೃತ್ವದಲ್ಲಿ ಭಾರಿ "ಕಾಪು ಘರ್ಜನೆ" ಹೆಸರಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ತುನಿ  ರೈಲು ನಿಲ್ದಾಣದಲ್ಲಿ ಇಡೀ ರೈಲಿಗೆ ಆಕ್ರೋಶಿತ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದರು. ಈ ಘಟನೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

NIRF ರ‍್ಯಾಂಕಿಂಗ್‌: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ

SCO Summit 2025: ಬೀಜಿಂಗ್‌, ಮಾಸ್ಕೋ ಮತ್ತು ವಾಷಿಂಗ್ಟನ್‌ ನಡುವೆ ಭಾರತದ ಜಾಗರೂಕ ನಡಿಗೆ (ಜಾಗತಿಕ ಜಗಲಿ)

SCROLL FOR NEXT