ಮಾಯಾವತಿ 
ದೇಶ

ಇವಿಎಂ ಇಲ್ಲದಿದ್ದರೆ ಬಿಜೆಪಿಗೆ ಗೆಲುವು ಅಸಾಧ್ಯ: ಉ.ಪ್ರ ಸ್ಥಳೀಯ ಸಂಸ್ಥೆ ಫಲಿತಾಂಶ ಬಗ್ಗೆ ಮಾಯಾವತಿ ಪ್ರತಿಕ್ರಿಯೆ

ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಗ್ಗೆ ಬಿಎಸ್ ಪಿ ನಾಯಕಿ ಮಾಯಾವತಿ ಪ್ರತಿಕ್ರಿಯೆ ನೀಡಿದ್ದು, ಎಲೆಕ್ಟ್ರಾನಿಕ್ ಮತಯಂತ್ರಗಳಿಲ್ಲದೇ ಇದ್ದರೆ, ಬಿಜೆಪಿಗೆ ಗೆಲುವು ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಗ್ಗೆ ಬಿಎಸ್ ಪಿ ನಾಯಕಿ ಮಾಯಾವತಿ ಪ್ರತಿಕ್ರಿಯೆ ನೀಡಿದ್ದು, ಎಲೆಕ್ಟ್ರಾನಿಕ್ ಮತಯಂತ್ರಗಳಿಲ್ಲದೇ ಇದ್ದರೆ, ಬಿಜೆಪಿಗೆ ಗೆಲುವು ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಒಂದು ವೇಳೆ 2019 ರ ಲೋಕಸಭಾ ಚುನಾವಣೆ ಬ್ಯಾಲೆಟ್ ಪೇಪರ್ ಗಳಲ್ಲಿ ನಡೆಯುವುದಿದ್ದರೆ ಬಿಎಸ್ ಪಿ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲಿದೆ ಎಂದೂ ಹೇಳಿದ್ದಾರೆ. 
ಬಿಜೆಪಿ ಪ್ರಾಮಾಣಿಕವಾಗಿದ್ದರೆ, ಪ್ರಜಾಭುತ್ವದಲ್ಲಿ ನಂಬಿಕೆ ಹೊಂದಿದ್ದರೆ ಇವಿಎಂ ಗಳನ್ನು ಬಿಟ್ಟು ಬ್ಯಾಲೆಟ್ ಪೇಪರ್ ಗಳ ಮೂಲಕ ಚುನಾವಣೆ ಎದುರಿಸಲಿ, 2019 ರ ಚುನಾವಣೆ ಇನ್ನೂ ಬಾಕಿ ಇದ್ದು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಿದರೆ ಬಿಎಸ್ ಪಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ, ಬಿಜೆಪಿಗೆ ಗೆಲುವು ಅಸಾಧ್ಯವಾಗಲಿದೆ ಎಂದು ಮಾಯಾವತಿ ಹೇಳಿದ್ದಾರೆ. 
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದಾಗಲೂ ಸಹ ಮಾಯಾವತಿ ಮತಯಂತ್ರ ದುರ್ಬಳಕೆ ಮಾಡುವ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT