ಮಾಯಾವತಿ 
ದೇಶ

ಇವಿಎಂ ಇಲ್ಲದಿದ್ದರೆ ಬಿಜೆಪಿಗೆ ಗೆಲುವು ಅಸಾಧ್ಯ: ಉ.ಪ್ರ ಸ್ಥಳೀಯ ಸಂಸ್ಥೆ ಫಲಿತಾಂಶ ಬಗ್ಗೆ ಮಾಯಾವತಿ ಪ್ರತಿಕ್ರಿಯೆ

ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಗ್ಗೆ ಬಿಎಸ್ ಪಿ ನಾಯಕಿ ಮಾಯಾವತಿ ಪ್ರತಿಕ್ರಿಯೆ ನೀಡಿದ್ದು, ಎಲೆಕ್ಟ್ರಾನಿಕ್ ಮತಯಂತ್ರಗಳಿಲ್ಲದೇ ಇದ್ದರೆ, ಬಿಜೆಪಿಗೆ ಗೆಲುವು ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಬಗ್ಗೆ ಬಿಎಸ್ ಪಿ ನಾಯಕಿ ಮಾಯಾವತಿ ಪ್ರತಿಕ್ರಿಯೆ ನೀಡಿದ್ದು, ಎಲೆಕ್ಟ್ರಾನಿಕ್ ಮತಯಂತ್ರಗಳಿಲ್ಲದೇ ಇದ್ದರೆ, ಬಿಜೆಪಿಗೆ ಗೆಲುವು ಅಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಒಂದು ವೇಳೆ 2019 ರ ಲೋಕಸಭಾ ಚುನಾವಣೆ ಬ್ಯಾಲೆಟ್ ಪೇಪರ್ ಗಳಲ್ಲಿ ನಡೆಯುವುದಿದ್ದರೆ ಬಿಎಸ್ ಪಿ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲಿದೆ ಎಂದೂ ಹೇಳಿದ್ದಾರೆ. 
ಬಿಜೆಪಿ ಪ್ರಾಮಾಣಿಕವಾಗಿದ್ದರೆ, ಪ್ರಜಾಭುತ್ವದಲ್ಲಿ ನಂಬಿಕೆ ಹೊಂದಿದ್ದರೆ ಇವಿಎಂ ಗಳನ್ನು ಬಿಟ್ಟು ಬ್ಯಾಲೆಟ್ ಪೇಪರ್ ಗಳ ಮೂಲಕ ಚುನಾವಣೆ ಎದುರಿಸಲಿ, 2019 ರ ಚುನಾವಣೆ ಇನ್ನೂ ಬಾಕಿ ಇದ್ದು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಿದರೆ ಬಿಎಸ್ ಪಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ, ಬಿಜೆಪಿಗೆ ಗೆಲುವು ಅಸಾಧ್ಯವಾಗಲಿದೆ ಎಂದು ಮಾಯಾವತಿ ಹೇಳಿದ್ದಾರೆ. 
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದಾಗಲೂ ಸಹ ಮಾಯಾವತಿ ಮತಯಂತ್ರ ದುರ್ಬಳಕೆ ಮಾಡುವ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT