ಒಖಿ ಚಂಡಮಾರುತ 
ದೇಶ

ಒಖಿ ಚಂಡಮಾರುತ: ರಕ್ಷಣಾ ಕಾರ್ಯಾಚರಣೆ, ಶೋಧ ಕಾರ್ಯಾಚರಣೆ ಮುಂದುವರಿಸಿದ ನೌಕಾಪಡೆ

ಒಖಿ ಚಂಡಮಾರುತ ಪೀಡಿತ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರತೀಯ ನೌಕಾ ಪಡೆ ಹಾಗೂ ಕೋಸ್ಟ್ ಗಾರ್ಡ್ ಪಡೆಗಳು ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ.

ನವದೆಹಲಿ: ಒಖಿ ಚಂಡಮಾರುತ ಪೀಡಿತ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರತೀಯ ನೌಕಾ ಪಡೆ ಹಾಗೂ ಕೋಸ್ಟ್ ಗಾರ್ಡ್ ಪಡೆಗಳು ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ. 
ಚಂಡಮಾರುತಕ್ಕೆ ಸಿಲುಕಿ ನಾಪತ್ತೆಯಾಗಿರುವ ಮೀನುಗಾರರಿಗಾಗಿ ಹಡಗು, ಡಾರ್ನಿಯರ್ ವಿಮಾನ, ಹೆಲಿಕಾಫ್ಟರ್ ಗಳನ್ನು ಬಳಸಿ ಶೋಧಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಐಎನ್ಎಸ್ ನಿರೀಕ್ಷಕ್, ಐಎನ್ಎಸ್ ಜಮುನಾ ಹಾಗೂ ಐಎನ್ಎಸ್ ಸಾಗರ್ ಧ್ವನಿ ಗಳು ಕೇರಳದಲ್ಲಿ ಶೋಧಕಾರ್ಯಾಚರಣೆಗೆ ನೆರವಾಗಿದ್ದು, ಐಎನ್ಎಸ್ ಶಾರ್ದಾ ಹಾಗೂ ಶಾರ್ದೂಲ್ ಲಕ್ಷದ್ವೀಪದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳಿಗೆ ಬಳಕೆಯಾಗಿವೆ.  
ರಕ್ಷಿಸಲಾಗಿರುವ 15 ಮೀನುಗಾರರನ್ನು ತಿರುವನಂತಪುರಂ ಗೆ ಕರೆತರಲಾಗುತ್ತಿದ್ದು, ಕೊಚ್ಚಿ ಗೆ 20 ಮೈಲಿ ದೂರದಲ್ಲಿ ಇಂದು ಬೆಳಿಗ್ಗೆ 4 ಮೀನುಗಾರರನ್ನು ನೌಕಾಪಡೆ ಹೆಲಿಕಾಫ್ಟರ್ ಮೂಲಕ ರಕ್ಷಿಸಲಾಗಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT