ಒಖಿ ಚಂಡಮಾರುತ 
ದೇಶ

ಒಖಿ ಚಂಡಮಾರುತ: ರಕ್ಷಣಾ ಕಾರ್ಯಾಚರಣೆ, ಶೋಧ ಕಾರ್ಯಾಚರಣೆ ಮುಂದುವರಿಸಿದ ನೌಕಾಪಡೆ

ಒಖಿ ಚಂಡಮಾರುತ ಪೀಡಿತ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರತೀಯ ನೌಕಾ ಪಡೆ ಹಾಗೂ ಕೋಸ್ಟ್ ಗಾರ್ಡ್ ಪಡೆಗಳು ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ.

ನವದೆಹಲಿ: ಒಖಿ ಚಂಡಮಾರುತ ಪೀಡಿತ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರತೀಯ ನೌಕಾ ಪಡೆ ಹಾಗೂ ಕೋಸ್ಟ್ ಗಾರ್ಡ್ ಪಡೆಗಳು ಶೋಧ ಕಾರ್ಯಾಚರಣೆ, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ. 
ಚಂಡಮಾರುತಕ್ಕೆ ಸಿಲುಕಿ ನಾಪತ್ತೆಯಾಗಿರುವ ಮೀನುಗಾರರಿಗಾಗಿ ಹಡಗು, ಡಾರ್ನಿಯರ್ ವಿಮಾನ, ಹೆಲಿಕಾಫ್ಟರ್ ಗಳನ್ನು ಬಳಸಿ ಶೋಧಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಐಎನ್ಎಸ್ ನಿರೀಕ್ಷಕ್, ಐಎನ್ಎಸ್ ಜಮುನಾ ಹಾಗೂ ಐಎನ್ಎಸ್ ಸಾಗರ್ ಧ್ವನಿ ಗಳು ಕೇರಳದಲ್ಲಿ ಶೋಧಕಾರ್ಯಾಚರಣೆಗೆ ನೆರವಾಗಿದ್ದು, ಐಎನ್ಎಸ್ ಶಾರ್ದಾ ಹಾಗೂ ಶಾರ್ದೂಲ್ ಲಕ್ಷದ್ವೀಪದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳಿಗೆ ಬಳಕೆಯಾಗಿವೆ.  
ರಕ್ಷಿಸಲಾಗಿರುವ 15 ಮೀನುಗಾರರನ್ನು ತಿರುವನಂತಪುರಂ ಗೆ ಕರೆತರಲಾಗುತ್ತಿದ್ದು, ಕೊಚ್ಚಿ ಗೆ 20 ಮೈಲಿ ದೂರದಲ್ಲಿ ಇಂದು ಬೆಳಿಗ್ಗೆ 4 ಮೀನುಗಾರರನ್ನು ನೌಕಾಪಡೆ ಹೆಲಿಕಾಫ್ಟರ್ ಮೂಲಕ ರಕ್ಷಿಸಲಾಗಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!