ಹಾನಿಗೀಡಾದ ಮೀನುಗಾರಿ ಬೋಟ್ 
ದೇಶ

ಒಖಿ ಚಂಡಮಾರುತ ಅಬ್ಬರ: ಮಂಗಳೂರಿನಿಂದ ಹೊರಟಿದ್ದ 2 ಹಡಗು ಮುಳುಗಡೆ

ದಕ್ಷಿಣ ಭಾರತದ ಕರಾವಳಿ ಪ್ರದೇಶದಲ್ಲಿ ಒಖಿ ಚಂಡಮಾರುತ ಅಬ್ಬರ ಮುಂದುವರೆದಿದ್ದು, ಮಂಗಳೂರಿನಿಂದ ಲಕ್ಷದ್ವೀಪದತ್ತ ಹೊರಟಿದ್ದ 2 ಸರಕು ಸಾಗಣಿಕಾ ಹಡಗುಗಳು ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿವೆ.

ಚೆನ್ನೈ: ದಕ್ಷಿಣ ಭಾರತದ ಕರಾವಳಿ ಪ್ರದೇಶದಲ್ಲಿ ಒಖಿ ಚಂಡಮಾರುತ ಅಬ್ಬರ ಮುಂದುವರೆದಿದ್ದು, ಮಂಗಳೂರಿನಿಂದ ಲಕ್ಷದ್ವೀಪದತ್ತ ಹೊರಟಿದ್ದ 2 ಸರಕು ಸಾಗಣಿಕಾ ಹಡಗುಗಳು ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿವೆ.
ಲಕ್ಷದ್ವೀಪದ ಬಳಿಯ ಕವರತಿ ಎಂಬಲ್ಲಿ ಈ ದುರ್ಘ‌ಟನೆ ಸಂಭವಿಸಿದ್ದು, ಅದೃಷ್ಟವಶಾತ್ ಹಡಗಿನಲ್ಲಿದ್ದ ಎಲ್ಲ 14 ಮಂದಿ ಸಿಬ್ಬಂದಿಗಳನ್ನೂ ನೌಕಾಪಡೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ, ಸುಮಾರು  38 ಮೀನುಗಾರಿಕಾ ದೋಣಿಗಳು ಸಮುದ್ರದ ಮಧ್ಯೆ ಸಿಲುಕಿಕೊಂಡಿದ್ದು, ಅದರಲ್ಲಿರುವವರಿಗೆ ನೌಕಾಪಡೆಯು ಆಹಾರ ಮತ್ತಿತರ ಪರಿಹಾರ ಕಿಟ್‌ ಗಳನ್ನು ಒದಗಿಸಿದೆ. ಅಂತೆಯೇ ನಾಪತ್ತೆಯಾಗಿರುವ ಇತರೆ ದೋಣಿಗಳ ಶೋಧ  ಕಾರ್ಯವನ್ನೂ ನಡೆಸಲಾಗುತ್ತಿದ್ದು, ಒಟ್ಟು ಎಷ್ಟು ಮಂದಿ ಮೀನುಗಾರರು ನೀರಿಗಿಳಿದಿದ್ದರು ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲವಾದರೂ ಸುಮಾರು 150 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಲಕ್ಷದ್ವೀಪದಲ್ಲಿ ಕಲ್ಪೇನಿ, ಮಿನಿಕಾಯ್‌, ಕವರತಿ, ಅಗತ್ತಿ, ಅಂಡ್ರೋತ್‌, ಕಡಮತ್‌, ಅಮಿನಿ ದ್ವೀಪ ಸೇರಿದಂತೆ ತಗ್ಗುಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದ್ದು, ಹೆಚ್ಚಿನವರಿಗೆ  ಶಾಲೆಗಳಲ್ಲಿ ಆಶ್ರಯ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಕಲ್ಪೇನಿಯಲ್ಲಿ ನಿಲ್ಲಿಸಲಾಗಿದ್ದ 5 ದೋಣಿಗಳು ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ. 
ಅಪಾಯದಲ್ಲಿದ್ದ ಮೀನುಗಾರರಿಗೆ ಜಪಾನ್ ನೆರವು!
ಇನ್ನು ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರರ ನೆರವಿಗೆ ಜಪಾನ್‌ ನ ಸರಕು ನೌಕೆಯೊಂದು ಧಾವಿಸಿದ್ದು, 60 ಮೀನುಗಾರರನ್ನು ರಕ್ಷಿಸಿದೆ ಎನ್ನಲಾಗಿದೆ. ಇನ್ನೊಂದೆಡೆ, ನಾಪತ್ತೆಯಾಗಿರುವ ಮೀನುಗಾರರ ಕುಟುಂಬ ಸದಸ್ಯರು  ಆತಂಕಕ್ಕೀಡಾಗಿದ್ದು, ಶುಕ್ರವಾರ ಕೊಲ್ಲಂ ಮತ್ತು ತಿರುವನಂತಪುರದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬೆಸ್ತರನ್ನು ರಕ್ಷಿಸುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!