ಹಾನಿಗೀಡಾದ ಮೀನುಗಾರಿ ಬೋಟ್ 
ದೇಶ

ಒಖಿ ಚಂಡಮಾರುತ ಅಬ್ಬರ: ಮಂಗಳೂರಿನಿಂದ ಹೊರಟಿದ್ದ 2 ಹಡಗು ಮುಳುಗಡೆ

ದಕ್ಷಿಣ ಭಾರತದ ಕರಾವಳಿ ಪ್ರದೇಶದಲ್ಲಿ ಒಖಿ ಚಂಡಮಾರುತ ಅಬ್ಬರ ಮುಂದುವರೆದಿದ್ದು, ಮಂಗಳೂರಿನಿಂದ ಲಕ್ಷದ್ವೀಪದತ್ತ ಹೊರಟಿದ್ದ 2 ಸರಕು ಸಾಗಣಿಕಾ ಹಡಗುಗಳು ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿವೆ.

ಚೆನ್ನೈ: ದಕ್ಷಿಣ ಭಾರತದ ಕರಾವಳಿ ಪ್ರದೇಶದಲ್ಲಿ ಒಖಿ ಚಂಡಮಾರುತ ಅಬ್ಬರ ಮುಂದುವರೆದಿದ್ದು, ಮಂಗಳೂರಿನಿಂದ ಲಕ್ಷದ್ವೀಪದತ್ತ ಹೊರಟಿದ್ದ 2 ಸರಕು ಸಾಗಣಿಕಾ ಹಡಗುಗಳು ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿವೆ.
ಲಕ್ಷದ್ವೀಪದ ಬಳಿಯ ಕವರತಿ ಎಂಬಲ್ಲಿ ಈ ದುರ್ಘ‌ಟನೆ ಸಂಭವಿಸಿದ್ದು, ಅದೃಷ್ಟವಶಾತ್ ಹಡಗಿನಲ್ಲಿದ್ದ ಎಲ್ಲ 14 ಮಂದಿ ಸಿಬ್ಬಂದಿಗಳನ್ನೂ ನೌಕಾಪಡೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ, ಸುಮಾರು  38 ಮೀನುಗಾರಿಕಾ ದೋಣಿಗಳು ಸಮುದ್ರದ ಮಧ್ಯೆ ಸಿಲುಕಿಕೊಂಡಿದ್ದು, ಅದರಲ್ಲಿರುವವರಿಗೆ ನೌಕಾಪಡೆಯು ಆಹಾರ ಮತ್ತಿತರ ಪರಿಹಾರ ಕಿಟ್‌ ಗಳನ್ನು ಒದಗಿಸಿದೆ. ಅಂತೆಯೇ ನಾಪತ್ತೆಯಾಗಿರುವ ಇತರೆ ದೋಣಿಗಳ ಶೋಧ  ಕಾರ್ಯವನ್ನೂ ನಡೆಸಲಾಗುತ್ತಿದ್ದು, ಒಟ್ಟು ಎಷ್ಟು ಮಂದಿ ಮೀನುಗಾರರು ನೀರಿಗಿಳಿದಿದ್ದರು ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲವಾದರೂ ಸುಮಾರು 150 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಲಕ್ಷದ್ವೀಪದಲ್ಲಿ ಕಲ್ಪೇನಿ, ಮಿನಿಕಾಯ್‌, ಕವರತಿ, ಅಗತ್ತಿ, ಅಂಡ್ರೋತ್‌, ಕಡಮತ್‌, ಅಮಿನಿ ದ್ವೀಪ ಸೇರಿದಂತೆ ತಗ್ಗುಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದ್ದು, ಹೆಚ್ಚಿನವರಿಗೆ  ಶಾಲೆಗಳಲ್ಲಿ ಆಶ್ರಯ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಕಲ್ಪೇನಿಯಲ್ಲಿ ನಿಲ್ಲಿಸಲಾಗಿದ್ದ 5 ದೋಣಿಗಳು ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ. 
ಅಪಾಯದಲ್ಲಿದ್ದ ಮೀನುಗಾರರಿಗೆ ಜಪಾನ್ ನೆರವು!
ಇನ್ನು ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರರ ನೆರವಿಗೆ ಜಪಾನ್‌ ನ ಸರಕು ನೌಕೆಯೊಂದು ಧಾವಿಸಿದ್ದು, 60 ಮೀನುಗಾರರನ್ನು ರಕ್ಷಿಸಿದೆ ಎನ್ನಲಾಗಿದೆ. ಇನ್ನೊಂದೆಡೆ, ನಾಪತ್ತೆಯಾಗಿರುವ ಮೀನುಗಾರರ ಕುಟುಂಬ ಸದಸ್ಯರು  ಆತಂಕಕ್ಕೀಡಾಗಿದ್ದು, ಶುಕ್ರವಾರ ಕೊಲ್ಲಂ ಮತ್ತು ತಿರುವನಂತಪುರದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬೆಸ್ತರನ್ನು ರಕ್ಷಿಸುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT