ಹಾನಿಗೀಡಾದ ಮೀನುಗಾರಿ ಬೋಟ್ 
ದೇಶ

ಒಖಿ ಚಂಡಮಾರುತ ಅಬ್ಬರ: ಮಂಗಳೂರಿನಿಂದ ಹೊರಟಿದ್ದ 2 ಹಡಗು ಮುಳುಗಡೆ

ದಕ್ಷಿಣ ಭಾರತದ ಕರಾವಳಿ ಪ್ರದೇಶದಲ್ಲಿ ಒಖಿ ಚಂಡಮಾರುತ ಅಬ್ಬರ ಮುಂದುವರೆದಿದ್ದು, ಮಂಗಳೂರಿನಿಂದ ಲಕ್ಷದ್ವೀಪದತ್ತ ಹೊರಟಿದ್ದ 2 ಸರಕು ಸಾಗಣಿಕಾ ಹಡಗುಗಳು ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿವೆ.

ಚೆನ್ನೈ: ದಕ್ಷಿಣ ಭಾರತದ ಕರಾವಳಿ ಪ್ರದೇಶದಲ್ಲಿ ಒಖಿ ಚಂಡಮಾರುತ ಅಬ್ಬರ ಮುಂದುವರೆದಿದ್ದು, ಮಂಗಳೂರಿನಿಂದ ಲಕ್ಷದ್ವೀಪದತ್ತ ಹೊರಟಿದ್ದ 2 ಸರಕು ಸಾಗಣಿಕಾ ಹಡಗುಗಳು ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿವೆ.
ಲಕ್ಷದ್ವೀಪದ ಬಳಿಯ ಕವರತಿ ಎಂಬಲ್ಲಿ ಈ ದುರ್ಘ‌ಟನೆ ಸಂಭವಿಸಿದ್ದು, ಅದೃಷ್ಟವಶಾತ್ ಹಡಗಿನಲ್ಲಿದ್ದ ಎಲ್ಲ 14 ಮಂದಿ ಸಿಬ್ಬಂದಿಗಳನ್ನೂ ನೌಕಾಪಡೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ, ಸುಮಾರು  38 ಮೀನುಗಾರಿಕಾ ದೋಣಿಗಳು ಸಮುದ್ರದ ಮಧ್ಯೆ ಸಿಲುಕಿಕೊಂಡಿದ್ದು, ಅದರಲ್ಲಿರುವವರಿಗೆ ನೌಕಾಪಡೆಯು ಆಹಾರ ಮತ್ತಿತರ ಪರಿಹಾರ ಕಿಟ್‌ ಗಳನ್ನು ಒದಗಿಸಿದೆ. ಅಂತೆಯೇ ನಾಪತ್ತೆಯಾಗಿರುವ ಇತರೆ ದೋಣಿಗಳ ಶೋಧ  ಕಾರ್ಯವನ್ನೂ ನಡೆಸಲಾಗುತ್ತಿದ್ದು, ಒಟ್ಟು ಎಷ್ಟು ಮಂದಿ ಮೀನುಗಾರರು ನೀರಿಗಿಳಿದಿದ್ದರು ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲವಾದರೂ ಸುಮಾರು 150 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಲಕ್ಷದ್ವೀಪದಲ್ಲಿ ಕಲ್ಪೇನಿ, ಮಿನಿಕಾಯ್‌, ಕವರತಿ, ಅಗತ್ತಿ, ಅಂಡ್ರೋತ್‌, ಕಡಮತ್‌, ಅಮಿನಿ ದ್ವೀಪ ಸೇರಿದಂತೆ ತಗ್ಗುಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದ್ದು, ಹೆಚ್ಚಿನವರಿಗೆ  ಶಾಲೆಗಳಲ್ಲಿ ಆಶ್ರಯ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಕಲ್ಪೇನಿಯಲ್ಲಿ ನಿಲ್ಲಿಸಲಾಗಿದ್ದ 5 ದೋಣಿಗಳು ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ. 
ಅಪಾಯದಲ್ಲಿದ್ದ ಮೀನುಗಾರರಿಗೆ ಜಪಾನ್ ನೆರವು!
ಇನ್ನು ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರರ ನೆರವಿಗೆ ಜಪಾನ್‌ ನ ಸರಕು ನೌಕೆಯೊಂದು ಧಾವಿಸಿದ್ದು, 60 ಮೀನುಗಾರರನ್ನು ರಕ್ಷಿಸಿದೆ ಎನ್ನಲಾಗಿದೆ. ಇನ್ನೊಂದೆಡೆ, ನಾಪತ್ತೆಯಾಗಿರುವ ಮೀನುಗಾರರ ಕುಟುಂಬ ಸದಸ್ಯರು  ಆತಂಕಕ್ಕೀಡಾಗಿದ್ದು, ಶುಕ್ರವಾರ ಕೊಲ್ಲಂ ಮತ್ತು ತಿರುವನಂತಪುರದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬೆಸ್ತರನ್ನು ರಕ್ಷಿಸುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT