ಕೋಜಿಕೋಡ್ ನಲ್ಲಿ ಅಪಾಯದಲ್ಲಿ ಸಿಲುಕಿದ ಬೋಟ್ 
ದೇಶ

‘ಒಖಿ’ಚಂಡಮಾರುತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ, ತಮಿಳುನಾಡು, ಕೇರಳಾಗೆ ರಕ್ಷಣಾ ಸಚಿವೆ ಭೇಟಿ

‘ಒಖಿ’ಚಂಡಮಾರುತ ತಮಿಳುನಾಡು ಹಾಗೂ ಕೇರಳದ ಕರಾವಳಿ ತೀರದಲ್ಲಿ ಭಾರಿ ಹಾನಿಯುಂಟು ಮಾಡಿದ್ದು, ತಮಿಳುನಾಡಿನ ಕನ್ಯಾಕುಮಾರಿ....

ಚೆನ್ನೈ: ‘ಒಖಿ’ಚಂಡಮಾರುತ ತಮಿಳುನಾಡು ಹಾಗೂ ಕೇರಳದ ಕರಾವಳಿ ತೀರದಲ್ಲಿ ಭಾರಿ ಹಾನಿಯುಂಟು ಮಾಡಿದ್ದು, ತಮಿಳುನಾಡಿನ ಕನ್ಯಾಕುಮಾರಿ ಸೇರಿದಂತೆ ಕೇಳದ ಕರವಾಳಿಯಲ್ಲಿ ಚಂಡಮಾರುತ್ತಕ್ಕೆ ಬಲಿಯಾದವರ ಸಂಖ್ಯೆ ಭಾನುವಾರ 14ಕ್ಕೆ ಏರಿಕೆಯಾಗಿದೆ. ಇನ್ನು ನೆರೆಯ ರಾಷ್ಟ್ರ ಶ್ರೀಲಂಕಾದಲ್ಲೂ ಚಂಡಮಾರುತದಿಂದಾಗಿ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಂದು ಕೇರಳ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಅಪಾಯದಲ್ಲಿದ್ದ ಸುಮಾರು 539 ಮೀನುಗಾರರನ್ನು ರಕ್ಷಿಸಲಾಗಿದ್ದು, ಕೇರಳದಲ್ಲಿ ಇದುವರೆಗೆ ಒಟ್ಟು 393 ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನೂ ನೂರಾರು ಮೀನುಗಾರರು ಸಮುದ್ರದಲ್ಲಿ ತಪ್ಪಿಸಿಕೊಂಡಿದ್ದು, ಅವರಿಗಾಗಿ ನೌಕಾಪಡೆ ತೀವ್ರ ಶೋಧ ನಡೆಸಿದೆ.
ಚಂಡಮಾರುತ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು ಹಾಗೂ ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಡಿಸೆಂಬರ್ 25ರ ವರೆಗೆ ಸಮುದ್ರದ ಆಳಕ್ಕೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚನೆ ನೀಡಿದೆ.
ಈ ಮಧ್ಯೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ತಿರುವನಂತಪುರಂ ಮತ್ತು ಕನ್ಯಾಕುಮಾರಿಗೆ ಭೇಟಿ ನೀಡಿ, ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ನೆರೆಯ ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT