ಕೋಜಿಕೋಡ್ ನಲ್ಲಿ ಅಪಾಯದಲ್ಲಿ ಸಿಲುಕಿದ ಬೋಟ್ 
ದೇಶ

‘ಒಖಿ’ಚಂಡಮಾರುತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ, ತಮಿಳುನಾಡು, ಕೇರಳಾಗೆ ರಕ್ಷಣಾ ಸಚಿವೆ ಭೇಟಿ

‘ಒಖಿ’ಚಂಡಮಾರುತ ತಮಿಳುನಾಡು ಹಾಗೂ ಕೇರಳದ ಕರಾವಳಿ ತೀರದಲ್ಲಿ ಭಾರಿ ಹಾನಿಯುಂಟು ಮಾಡಿದ್ದು, ತಮಿಳುನಾಡಿನ ಕನ್ಯಾಕುಮಾರಿ....

ಚೆನ್ನೈ: ‘ಒಖಿ’ಚಂಡಮಾರುತ ತಮಿಳುನಾಡು ಹಾಗೂ ಕೇರಳದ ಕರಾವಳಿ ತೀರದಲ್ಲಿ ಭಾರಿ ಹಾನಿಯುಂಟು ಮಾಡಿದ್ದು, ತಮಿಳುನಾಡಿನ ಕನ್ಯಾಕುಮಾರಿ ಸೇರಿದಂತೆ ಕೇಳದ ಕರವಾಳಿಯಲ್ಲಿ ಚಂಡಮಾರುತ್ತಕ್ಕೆ ಬಲಿಯಾದವರ ಸಂಖ್ಯೆ ಭಾನುವಾರ 14ಕ್ಕೆ ಏರಿಕೆಯಾಗಿದೆ. ಇನ್ನು ನೆರೆಯ ರಾಷ್ಟ್ರ ಶ್ರೀಲಂಕಾದಲ್ಲೂ ಚಂಡಮಾರುತದಿಂದಾಗಿ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಂದು ಕೇರಳ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಅಪಾಯದಲ್ಲಿದ್ದ ಸುಮಾರು 539 ಮೀನುಗಾರರನ್ನು ರಕ್ಷಿಸಲಾಗಿದ್ದು, ಕೇರಳದಲ್ಲಿ ಇದುವರೆಗೆ ಒಟ್ಟು 393 ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನೂ ನೂರಾರು ಮೀನುಗಾರರು ಸಮುದ್ರದಲ್ಲಿ ತಪ್ಪಿಸಿಕೊಂಡಿದ್ದು, ಅವರಿಗಾಗಿ ನೌಕಾಪಡೆ ತೀವ್ರ ಶೋಧ ನಡೆಸಿದೆ.
ಚಂಡಮಾರುತ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು ಹಾಗೂ ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಡಿಸೆಂಬರ್ 25ರ ವರೆಗೆ ಸಮುದ್ರದ ಆಳಕ್ಕೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚನೆ ನೀಡಿದೆ.
ಈ ಮಧ್ಯೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ತಿರುವನಂತಪುರಂ ಮತ್ತು ಕನ್ಯಾಕುಮಾರಿಗೆ ಭೇಟಿ ನೀಡಿ, ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ನೆರೆಯ ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT