ರಾಜೇಂದ್ರ ಪ್ರಸಾದ್ 
ದೇಶ

ಡಾ. ರಾಜೇಂದ್ರ ಪ್ರಸಾದ್ 133ನೇ ಜಯಂತಿ: ಪ್ರಧಾನಿ ಮೋದಿ, ಕೇಂದ್ರ ಸಚಿವರಿಂದ ಟ್ವೀಟ್

ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ 133 ನೇ ಜನುಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೆನಪಿಸಿಕೊಂಡಿದ್ದಾರೆ.

ನವದೆಹಲಿ: ಸ್ವತಂತ್ರ ಭಾರತದ  ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ 133 ನೇ ಜನುಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೆನಪಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಟ್ವಿಟ್ಟರ್ ನಲ್ಲಿ ಡಾ. ರಾಜೇಂದ್ರ ಪ್ರಸಾದ್ ಅವರ ಚಿತ್ರವನ್ನು ಪೋಸ್ಟ್ ಮಾಡಿದ್ದಲ್ಲದೆ ಸಂದೇಶವನ್ನು ಬರೆದುಕೊಂಡಿದ್ದಾರೆ.
I
"ಭಾರತವು ಮೊದಲ ರಾಷ್ಟ್ರಪತಿಗಳಾದ ರಾಜೇಂದ್ರ ಪ್ರಸಾದ್ ಅವರನ್ನು ಅವರ ಜಯಂತಿಯಂದು ನೆನೆಯುತ್ತದೆ. ತಲೆಮಾರುಗಳಿಂದಲೂ ಭಾರತೀಯರು ಡಾ. ರಾಜೇಂದ್ರ ಪ್ರಸಾದ್ ಅವರ ವಿಶೇಷ ಸೇವೆಗಳಿಂದ ಸ್ಫೂರ್ತಿ ಪಡೆಯುತ್ತಿದ್ದಾರೆ." ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ರೈಲ್ವೆ ಮತ್ತು ಕಲ್ಲಿದ್ದಲು ಸಚಿವ, ಪಿಯುಶ್ ಗೋಯಲ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ಧರ್ಮೇಂದ್ರ ಪ್ರಧಾನ್ ಅವರುಗಳು ಸಹ ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನಾಚರಣೆಯಂದು ಅವರ ಸ್ಮರಣೆಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಜೇಂದ್ರ ಪ್ರಸಾದ್ ಭಾರತದ ಮೊದಲ ರಾಷ್ಟ್ರಪತಿಗಳಾಗಿದ್ದರು. 1950-1962 ಅವಧಿಯಲ್ಲಿ ರಾಷ್ಟ್ರಪತಿಗಳಗಿ ಅಧಿಕಾರ ಅಧಿಕಾರ ನಿರ್ವಹಿಸಿದ್ದರು.  ಭಾರತ ಸ್ವಾತಂತ್ರ ಸಂಗ್ರಾಮದಲ್ಲಿ ಭಾಗವಹಿಸಿದ್ದ ರಾಜೇಂದ್ರ ಪ್ರಸಾದ್  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಮುಖ ನಾಯಕರಾಗಿದ್ದರು. ಗಾಂಧೀಜಿಯವರ ಅನುಯಾಯಿಯಾಗಿದ್ದ ಇವರು ಗಾಂಧಿ ಅವರ ಉಪ್ಪಿನ ಸತ್ಯಾಗ್ರಹ ಹಾಗೂ ಕ್ವಿಟ್ ಇಂಡಿಯಾ ಚಳವಳಿಯಿಂದ ಸಪೂರ್ತಿ ಪಡೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT