ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 
ದೇಶ

ಪ್ರಧಾನಿ ಮೋದಿ ಹಿನ್ನೆಲೆಯ ವಿಷಯವಾಗಿ ಸ್ಪರ್ಧೆ ಇಲ್ಲ: ಮನಮೋಹನ್ ಸಿಂಗ್

ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹಿನ್ನೆಲೆ ಮತ್ತೊಮ್ಮೆ ಚರ್ಚಾ ವಿಷಯವಾಗಿದ್ದು, ನನ್ನ ಹಿನ್ನೆಲೆಯ ವಿಷಯದಲ್ಲಿ ದೇಶದ ಅನುಕಂಪವನ್ನು

ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹಿನ್ನೆಲೆ ಮತ್ತೊಮ್ಮೆ ಚರ್ಚಾ ವಿಷಯವಾಗಿದ್ದು, ನನ್ನ ಹಿನ್ನೆಲೆಯ ವಿಷಯದಲ್ಲಿ ದೇಶದ ಅನುಕಂಪವನ್ನು ನಿರೀಕ್ಷಿಸುವುದಿಲ್ಲ, ಈ ವಿಷಯವಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ಪರ್ಧಿಸಲು ಇಷ್ಟಪಡುವುದಿಲ್ಲ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಂತೆ ತಾವು ತಮ್ಮ ಹಿನ್ನೆಲೆಯ ಬಗ್ಗೆ ಹೇಳಿಕೊಳ್ಳದೇ ಇರುವುದಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಮನಮೋಹನ್ ಸಿಂಗ್, ನನ್ನ ಹಿನ್ನೆಲೆಯ ವಿಷಯದಲ್ಲಿ ದೇಶದ ಅನುಕಂಪವನ್ನು ನಿರೀಕ್ಷಿಸುವುದಿಲ್ಲ, ನಾನು ಹಿನ್ನೆಲೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ಪರ್ಧಿಸಲು ಇಚ್ಛಿಸುವುದಿಲ್ಲ ಎಂದಿದ್ದಾರೆ. 
ಇದೇ ವೇಳೆ ನೋಟು ನಿಷೇಧ, ಜಿಎಸ್ ಟಿ ವಿಷಯವಾಗಿಯೂ ಡಾ. ಸಿಂಗ್ ಮಾತನಾಡಿದ್ದು, ನೋಟು ನಿಷೇಧ, ಜಿಎಸ್ ಟಿಯನ್ನು ಸರಿಯಾಗಿ ಜಾರಿಗೊಳಿಸದೇ ಇರುವುದು, ಭ್ರಷ್ಟಾಚಾರ ತಡೆಗಟ್ಟುವ ಸೋಗಿನಲ್ಲಿ ಎದುರಾಗಿರುವ ತೆರಿಗೆ ಭಯೋತ್ಪಾದನೆ ಖಂಡಿತವಾಗಿಯೂ ಮಧ್ಯಮ-ಸಣ್ಣ ಉದ್ಯಮಗಳಿಗೆ ಸಮಸ್ಯೆಯಾಗಿದೆ, ಇನ್ನು ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾದಂತಹ ಘೋಷಣೆಗಳಿದ್ದು, ಅವುಗಳಿಕ್ಗೆ ಪರಿಣಾಮಕಾರಿ ನೀತಿಗಳಿಲ್ಲದಂತಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT