ಮಣಿ ಶಂಕರ್ ಅಯ್ಯರ್ 
ದೇಶ

ರಾಹುಲ್ ಗಾಂಧಿ ಪದೋನ್ನತಿ ಸಮರ್ಥನೆಗೆ ಮೊಘಲ್ ಉದಾಹರಣೆ ನೀಡಿದ ಮಣಿಶಂಕರ್ ಅಯ್ಯರ್!

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನ ವಂಶಾಡಳಿತದ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ.

ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನ ವಂಶಾಡಳಿತದ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಆದರೆ ರಾಹುಲ್ ಗಾಂಧಿ ಪದೋನ್ನತಿಯನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇಂತಹದ್ದೇ ಸಮರ್ಥನೆಗೆ ಯತ್ನಿಸಿ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಎಡವಟ್ಟು ಮಾಡಿಕೊಂಡಿದ್ದಾರೆ. 
ರಾಹುಲ್ ಗಾಂಧಿ ಅವರ ಪದೋನ್ನತಿಯನ್ನು ಸಮರ್ಥಿಸುವ ಭರದಲ್ಲಿ ಮಣಿಶಂಕರ್ ಅಯ್ಯರ್ ಮೊಘಲರ ವಂಶಾಡಳಿತವನ್ನು ಉದಾಹರಣೆಯಾಗಿ ನೀಡಿದ್ದಾರೆ. ರಾಹುಲ್ ಗಾಂಧಿ ಪದೋನ್ನತಿ ಕುರಿತ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಮಣಿಶಂಕರ್ ಅಯ್ಯರ್, ಷಾ ಜಹಾನ್ ಜಹಂಗೀರ್ ಸ್ಥಾನಕ್ಕೆ ಬಂದಾಗ ಯಾವುದಾದರು ಚುನಾವಣೆ ನಡೆದಿತ್ತಾ? ಔರಂಗಜೇಬ್ ಷಾ ಜಹಾನ್ ಸ್ಥಾನಕ್ಕೆ ಬಂದಾಗ ಯಾವುದಾದರೂ ಚುನಾವಣೆ ನಡೆದಿತ್ತಾ? ಎಂದು ಪ್ರಶ್ನಿಸಿದ್ದಾರೆ. ರಾಜನ ಸಿಂಹಾಸನ ಅವರ ವಂಶದವರಿಗೇ ಸೇರಿದ್ದು ಎಂಬುದು ಎಲ್ಲರಿಗೂ ಗೊತ್ತಿದೆ ಆದರೆ ಪ್ರಜಾಪ್ರಭುತ್ವದಲ್ಲಿ ಚುನಾವಣೆ ನಡೆಯುತ್ತದೆ, ಪೂನಾವಾಲ ಅವರು ನಾಮಪತ್ರ ಸಲ್ಲಿಸಿ ಚುನಾವಣೆ ಎದುರಿಸಲು ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದಾರೆ. 
ಗುಜರಾತ್ ಚುನಾವಣೆ ಪ್ರಚಾರದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಮಣಿ ಶಂಕರ್ ಅಯ್ಯರ್ ಒಂದು ಕುಟುಂಬಕ್ಕೆ ನಿಷ್ಠೆ ತೋರುವುದರಲ್ಲಿ ಹಿಂದೇಟು ಹಾಕುವುದಿಲ್ಲ, ಹಾಗಾಗಿಯೇ ಅವರು ರಾಹುಲ್ ಗಾಂಧಿ ಪದೋನ್ನತಿ ಬಗ್ಗೆ ಮಾತನಾಡುತ್ತಾ  ಔರಂಗಜೇಬ್ ಷಾ ಜಹಾನ್ ಸ್ಥಾನಕ್ಕೆ ಬಂದಾಗ ಯಾವುದಾದರೂ ಚುನಾವಣೆ ನಡೆದಿತ್ತಾ? ಎಂದು ಪ್ರಶ್ನಿಸಿದ್ದಾರೆ, ಕಾಂಗ್ರೆಸ್ ಗೆ ಔರಂಗಜೇಬ್ ರಾಜ್ ಸಿಕ್ಕಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ನಮಗೆ 125 ಕೋಟಿ ಭಾರತೀಯರೇ ಹೈಕಮಾಂಡ್ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT