ಕನಿಮೋಳಿ, ರಾಜಾ 
ದೇಶ

2ಜಿ ಸ್ಪೆಕ್ಟ್ರಂ ಹಗರಣ: ಡಿ.21ಕ್ಕೆ ಅಂತಿಮ ತೀರ್ಪು ಪ್ರಕಟ

ಮಾಜಿ ಟೆಲೆಕಾಂ ಸಚಿವ ಎ ರಾಜಾ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಪ್ರಮುಖ ಆರೋಪಿಗಳಾಗಿರುವ 2ಜಿ ಸ್ಪೆಕ್ಟ್ರಂ....

ನವದೆಹಲಿ: ಮಾಜಿ ಟೆಲೆಕಾಂ ಸಚಿವ ಎ ರಾಜಾ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಪ್ರಮುಖ ಆರೋಪಿಗಳಾಗಿರುವ 2ಜಿ ಸ್ಪೆಕ್ಟ್ರಂ ಹಗರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ಕೋರ್ಟ್ ಡಿಸೆಂಬರ್ 21ಕ್ಕೆ ಕಾಯ್ದಿರಿಸಿದೆ. 
ಪ್ರಕರಣದ ಸುದಿರ್ಘೀ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಧೀಶ ಒ ಪಿ ಸೈನಿ ಅವರು, ಅಂತಿಮ ತೀರ್ಪುನ್ನು ಡಿಸೆಂಬರ್ 21ರಂದು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಅಂದು 2ಜಿ ಸ್ಪೆಕ್ಟ್ರಂ ಹಗರಣದ ಎಲ್ಲಾ ಆರೋಪಿಗಳು ಖುದ್ದು ಹಾಜರಿರಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಎರಡು ಪ್ರತ್ಯೇಕ ಪ್ರಕರಣಗಳನ್ನು ವಿಚಾರಣೆ ನಡೆಸಿದ್ದು, ಒಂದು ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದರೆ, ಮತ್ತೊಂದು ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸಿದೆ.
2ಜಿ ಸ್ಪೆಕ್ಟ್ರಂ ಹಗರಣ ಸಂಬಂಧ 2011ರಲ್ಲಿ ಎ.ರಾಜಾ, ಕನಿಮೋಳಿ ಹಾಗೂ ಇತರರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿತ್ತು. 2ಜಿ ಸ್ಪೆಕ್ಟ್ರಂಗಾಗಿ ನೀಡಿದ 122 ಲೈಸನ್ಸ್ ಗಳಿಂದ ಸರ್ಕಾರದ ಬೊಕ್ಕಸಕ್ಕೆ ಬರೊಬ್ಬರಿ 30,984 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಸಿಬಿಐ ತನ್ನ ಚಾರ್ಜ್ ಶೀಟ್ ನಲ್ಲಿ ಆರೋಪಿಸಿದೆ. 
ಇನ್ನು 2014ರ ಏಪ್ರಿಲ್ ನಲ್ಲಿ ಅಕ್ರಮ ಹಣ ವಹಿವಾಟು ಸೇರಿದಂತೆ 2ಜಿ ಸ್ಪೆಕ್ಟ್ರಂ ಹಗರಣ ಸಂಬಂಧ ಎ.ರಾಜಾ, ಕನ್ನಿಮೋಳಿ ಸೇರಿದಂತೆ 19 ಜನರ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿಸಿದ್ದು, ಸರ್ಕಾರದ ಬೊಕ್ಕಸಕ್ಕೆ ಬಹುಕೋಟಿ ನಷ್ಟವನ್ನುಂಟುಮಾಡಿದ ಈ ಹಗರಣದ ಅಂತಿಮ ತೀರ್ಪುನ್ನು ಡಿಸೆಂಬರ್ 21ಕ್ಕೆ ನವದೆಹಲಿಯ ಪಟಿಯಾಲ ವಿಶೇಷ ನ್ಯಾಯಾಲಯ ಘೋಷಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT