ಚೆನ್ನೈ: ಆರ್ ಕೆ ನಗರ ಉಪ ಚುನಾವಣೆಗೆ ಖ್ಯಾತ ತಮಿಳು ನಟ ವಿಶಾಲ್ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಸಂಬಂಧಿ ದೀಪಾ ಜಯಕುಮಾರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ಮಂಗಳವಾರ ತಿರಸ್ಕರಿಸಿದೆ.
ನಟ ಹಾಗೂ ನಾಡಿಗರ್ ಸಂಗಮ್ ಪ್ರಧಾನ ಕಾರ್ಯದರ್ಶಿಯಾಗಿರುವ ವಿಶಾಲ್ ಅವರು ಕಳೆದ ಶನಿವಾರ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದರು. ಅಲ್ಲದೆ ಸೋಮವಾರ ಆರ್ ಕೆ ನಗರ ಉಪ ಚುನಾವಣೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.
ಇನ್ನು ದೀಪಾ ಜಯಕುಮಾರ್ ಸಹ ನಿನ್ನೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ಆದರೆ ನಾಮಪತ್ರ ಅರ್ಜಿಯಲ್ಲಿ ಕೆಲವು ಭಿನ್ನತೆಗಳಿವೆ ಎಂಬ ಕಾರಣಕ್ಕೆ ವಿಶಾಲ್ ಹಾಗೂ ದೀಪಾ ಅವರ ನಾಮಪಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದಾರೆ.
ಜಯಲಲಿತಾ ಅವರ ನಿಧನದಿಂದ ತೆರವಾದ ಆರ್ ಕೆ ನಗರಕ್ಕೆ ಈಗ ಎರಡನೇ ಬಾರಿ ಉಪ ಚುನಾವಣೆ ನಿಗದಿಯಾಗಿದೆ. ಈ ಹಿಂದೆ ಮತದಾರರಿಗೆ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂಬ ಕಾರಣಕ್ಕೆ ಚುನಾವಣಾ ಆಯೋಗ ಉಪ ಚುನಾವಣೆಯನ್ನೇ ರದ್ದುಗೊಳಿಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos