ವಿಶಾಲ್, ದೀಪಾ ಜಯಕುಮಾರ್ 
ದೇಶ

ಚೆನ್ನೈ ಆರ್ ಕೆ ನಗರ ಉಪ ಚುನಾವಣೆ: ನಟ ವಿಶಾಲ್, ದೀಪಾ ಜಯಕುಮಾರ್ ನಾಮಪತ್ರ ತಿರಸ್ಕೃತ

ಆರ್ ಕೆ ನಗರ ಉಪ ಚುನಾವಣೆಗೆ ಖ್ಯಾತ ತಮಿಳು ನಟ ವಿಶಾಲ್ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ....

ಚೆನ್ನೈ: ಆರ್ ಕೆ ನಗರ ಉಪ ಚುನಾವಣೆಗೆ ಖ್ಯಾತ ತಮಿಳು ನಟ ವಿಶಾಲ್ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಸಂಬಂಧಿ ದೀಪಾ ಜಯಕುಮಾರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ಮಂಗಳವಾರ ತಿರಸ್ಕರಿಸಿದೆ.
ನಟ ಹಾಗೂ ನಾಡಿಗರ್ ಸಂಗಮ್ ಪ್ರಧಾನ ಕಾರ್ಯದರ್ಶಿಯಾಗಿರುವ ವಿಶಾಲ್ ಅವರು ಕಳೆದ ಶನಿವಾರ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದರು. ಅಲ್ಲದೆ ಸೋಮವಾರ ಆರ್ ಕೆ ನಗರ ಉಪ ಚುನಾವಣೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. 
ಇನ್ನು ದೀಪಾ ಜಯಕುಮಾರ್ ಸಹ ನಿನ್ನೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ಆದರೆ ನಾಮಪತ್ರ ಅರ್ಜಿಯಲ್ಲಿ ಕೆಲವು ಭಿನ್ನತೆಗಳಿವೆ ಎಂಬ ಕಾರಣಕ್ಕೆ ವಿಶಾಲ್ ಹಾಗೂ ದೀಪಾ ಅವರ ನಾಮಪಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದಾರೆ.
ಜಯಲಲಿತಾ ಅವರ ನಿಧನದಿಂದ ತೆರವಾದ ಆರ್ ಕೆ ನಗರಕ್ಕೆ ಈಗ ಎರಡನೇ ಬಾರಿ ಉಪ ಚುನಾವಣೆ ನಿಗದಿಯಾಗಿದೆ. ಈ ಹಿಂದೆ ಮತದಾರರಿಗೆ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂಬ ಕಾರಣಕ್ಕೆ ಚುನಾವಣಾ ಆಯೋಗ ಉಪ ಚುನಾವಣೆಯನ್ನೇ ರದ್ದುಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT