ಶರದ್ ಯಾದವ್ 
ದೇಶ

ಶರದ್ ಯಾದವ್, ಅಲಿ ಅನ್ವರ್ ರಾಜ್ಯಸಭಾ ಸದಸ್ಯತ್ವ ಅನರ್ಹ

ಜೆಡಿಯು ಬಂಡಾಯ ನಾಯಕ ಶರದ್ ಯಾದವ್ ಹಾಗೂ ಅಲಿ ಅನ್ವರ್ ಅವರ ರಾಜ್ಯಸಭಾ ಸದಸ್ಯತ್ವವನ್ನು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾಧ್ಯಕ್ಷರಾದ ವೆಂಕಯ್ಯ ನಾಯ್ಡು ಅನರ್ಹಗೊಳಿಸಿದ್ದಾರೆ.

ನವದೆಹಲಿ: ಜೆಡಿಯು ಬಂಡಾಯ ನಾಯಕ ಶರದ್ ಯಾದವ್ ಹಾಗೂ ಅಲಿ ಅನ್ವರ್ ಅವರ ರಾಜ್ಯಸಭಾ ಸದಸ್ಯತ್ವವನ್ನು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾಧ್ಯಕ್ಷರಾದ ವೆಂಕಯ್ಯ ನಾಯ್ಡು ಅನರ್ಹಗೊಳಿಸಿದ್ದಾರೆ. 
ಈ ಕುರಿತು ಜೆಡಿಯು ನಾಯಕ ಆರ್ ಸಿಪಿ ಸಿಂಗ್ ಮಾಹಿತಿ ನೀಡಿದ್ದು, ನಾವು ಅಲಿ ಅನ್ವರ್ ಅನ್ಸಾರಿ ಹಾಗು ಶರದ್ ಯಾದವ್ ಅವರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಗೊಳಿಸಿರುವ ರಾಜ್ಯಸಭಾಧ್ಯಕ್ಷರು, ಶರದ್ ಯಾದವ್ ಹಾಗೂ ಅಲಿ ಅನ್ವರ್ ಅವರ ರಾಜ್ಯಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದಾಗಿ ಹೇಳಿದ್ದಾರೆ ಎಂದಿದ್ದಾರೆ. 
ವೆಂಕಯ್ಯ ನಾಯ್ಡು ಅವರು ಪ್ರಕಟಿಸಿರುವ ಆದೇಶದ ಪ್ರತಿಯನ್ನೂ ಸಹ ಫೇಸ್ ಬುಕ್ ನಲ್ಲಿ ಪ್ರಕಟಿಸಿರುವ ಆರ್ ಸಿಪಿ ಸಿಂಗ್, ಪಕ್ಷದ ರಾಷ್ಟ್ರಾಧ್ಯಕ್ಷ ನಿತೀಶ್ ಕುಮಾರ್ ಅವರೊಂದಿಗೆ ಒಗ್ಗಟ್ಟಿನಿಂದ ಇದ್ದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆ ತಿಳಿಸಿದ್ದಾರೆ. 
ಜೆಡಿಯು ಬಂಡಾಯ ನಾಯಕರಾಗಿದ್ದ ಶರದ್ ಯಾದವ್ ಹಾಗೂ ಅನ್ಸಾರಿ ಅವರ ರಾಜ್ಯಸಭಾ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ಬಿಹಾರ ಜೆಡಿಯು ರಾಷ್ಟ್ರಾಧ್ಯಕ್ಷ ನಿತೀಶ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಬಿಹಾರದಲ್ಲಿ ಆರ್ ಜೆಡಿ, ಕಾಂಗ್ರೆಸ್ ನೊಂದಿಗಿನ ಮಹಾ ಮೈತ್ರಿಯನ್ನು ನಿತೀಶ್ ಕುಮಾರ್ ತೊರೆದಿದ್ದನ್ನು ಜೆಡಿಯು ನಾಯಕ ಶರದ್ ಯಾದವ್ ವಿರೋಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ