ದೇಶ

ರಾಹುಲ್ ಗಾಂಧಿ 'ಬಾಬರ್ ಭಕ್ತ': ಬಿಜೆಪಿ ಲೇವಡಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ "ಬಾಬರ್ ಭಕ್ತ' ಮತ್ತು 'ಖಿಲ್ಜಿ ವಂಶದವರು' ಎಂದು ಬಿಜೆಪಿ ಮುಖಂಡ ಲೇವಡಿ ಮಾಡಿದ್ದಾರೆ...

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ "ಬಾಬರ್ ಭಕ್ತ' ಮತ್ತು 'ಖಿಲ್ಜಿ ವಂಶದವರು' ಎಂದು ಬಿಜೆಪಿ ಮುಖಂಡ ಲೇವಡಿ ಮಾಡಿದ್ದಾರೆ. 
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ವಿರೋಧಿಸುತ್ತಿರುವ ಎಐಎಂಐಎಂ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಸಯ್ಯದ್ ಅಬ್ದುಲ್ ಖಾದಿರ್ ಜಿಲನಿ ಸೇರಿದಂತೆ ರಾಹುಲ್ ಗಾಂಧಿ ಅವರನ್ನು ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಕಟುವಾಗಿ ಟೀಕಿಸಿದ್ದಾರೆ. 
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ವಿರೋಧಿಸುತ್ತಿರುವವರ ಸಾಲಿಗೆ ರಾಹುಲ್ ಗಾಂಧಿ ಸಹ ಸೇರಿಕೊಂಡಿದ್ದಾರೆ. ರಾಮ ಮಂದಿರವನ್ನು ಬಾಬರ್ ಮತ್ತು ಸೋಮನಾಥ ಮಂದಿರವನ್ನು ಖಿಲ್ಜಿ ಧ್ವಂಸ ಮಾಡಿದ, ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಸಾಮ್ರಾಜ್ಯವು ಇಸ್ಲಾಮಿಕ್ ದಾಳಿಕೋರರನ್ನು ಹೊಂದಿದೆ ಎಂದು ನರಸಿಂಹ ರಾವ್ ಟ್ವೀಟ್ ಮಾಡಿದ್ದಾರೆ. 
ನಿನ್ನೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಮ ಜನ್ಮಭೂಮಿ-ಬಾಬರ್ ಮಸೀದಿ ವಿವಾದದ ಕುರಿತು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT