ಬಾಬ್ರಿ ಮಸೀದಿ 
ದೇಶ

ಬಾಬ್ರಿ ಮಸೀದಿ ಧ್ವಂಸಗೊಂಡು ಇಂದಿಗೆ 25 ವರ್ಷ

ರಾಮಜನ್ಮಭೂಮಿ ವಿವಾದ ಹಲವು ದಶಕಗಳಿಗೆ ಬಗೆಹರಿಯದೇ ಹಾಗೆಯೇ ಉಳಿದಿದೆ. ಅನೇಕ ಬಾರಿ ರಾಮಮಂದಿರಕ್ಕಾಗಿ......

ರಾಮಜನ್ಮಭೂಮಿ ವಿವಾದ ಹಲವು ದಶಕಗಳಿಗೆ ಬಗೆಹರಿಯದೇ ಹಾಗೆಯೇ ಉಳಿದಿದೆ. ಅನೇಕ ಬಾರಿ ರಾಮಮಂದಿರಕ್ಕಾಗಿ ಚಳುವಳಿಗಳು ತೀವ್ರಗೊಂಡಿದ್ದು, ಶ್ರೀರಾಮ ಜನ್ಮಿಸಿದ ಪ್ರದೇಶದಲ್ಲಿ ನಿರ್ಮಿಸಲಾಗಿತ್ತು ಎನ್ನಲಾದ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ಘಟನೆ ನಡೆದು ಇಂದಿಗೆ 25 ವರ್ಷಗಳು.
1992, ಡಿ.06 ರಂದು ಕರಸೇವಕರ ಆಕ್ರೋಶಕ್ಕೆ ಬಾಬ್ರಿ ಮಸೀದಿ ಗುರಿಯಾಗಿ ಧ್ವಂಸಗೊಂಡ ದಿನ. ಏಕ್ ಧಕ್ಕಾ ಔರ್ ದೋ, "ಬಾಬ್ರಿ ಮಸ್ಜೀದ್ ತೋಡ್ ದೋ" ಎಂಬ ಘೋಷಣೆಯೊಂದಿಗೆ ಕರಸೇವಕರು ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ್ದರು. 1990 ರಿಂದ ರಾಮಜನ್ಮಭೂಮಿ ಚಳುವಳಿ ಕಾವು ಪಡೆದುಕೊಂಡಿತ್ತು. ಆರ್ ಎಸ್ ಎಸ್ ಹಾಗೂ ವಿಹೆಚ್ ಪಿ ಮುಖಂಡರ ನೇತೃತ್ವದಲ್ಲಿ ರಾಮ ಜನ್ಮಭೂಮಿಗಾಗಿ ನಿರಂತರ ಹೋರಾಟ ನಡೆದಿದ್ದು, ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ 1992 ರಲ್ಲಿ ನಡೆದಿದ್ದ ಘಟನೆ ರಾಮಜನ್ಮಭೂಮಿ ಪ್ರಕರಣಕ್ಕೆ ಹಾಗೂ ದೇಶದ ರಾಜಕಾರಣದಲ್ಲಿ ದೊಡ್ಡ ಮಟ್ಟದ ತಿರುವು ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT