ಕಪಿಲ್ ಸಿಬಲ್ 
ದೇಶ

ಅಯೋಧ್ಯೆ ತೀರ್ಪನ್ನು ಮುಂದೂಡುವಂತೆ ಮನವಿ ಮಾಡಿದ್ದ ಕಪಿಲ್ ಸಿಬಲ್ ಗೆ ಸುನ್ನಿ ಬೋರ್ಡ್ ತರಾಟೆ!

ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುನ್ನಿ ವಕ್ಫ್ ಬೋರ್ಡ್ ನ್ನು ಪ್ರತಿನಿಧಿಸುತ್ತಿರುವ ನ್ಯಾಯವಾದಿ ಕಪಿಲ್ ಸಿಬಲ್ ನ್ನು ಅವರ ಕಕ್ಷಿದಾರರೇ ತರಾಟೆಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುನ್ನಿ ವಕ್ಫ್ ಬೋರ್ಡ್ ನ್ನು ಪ್ರತಿನಿಧಿಸುತ್ತಿರುವ ನ್ಯಾಯವಾದಿ ಕಪಿಲ್ ಸಿಬಲ್ ನ್ನು ಅವರ ಕಕ್ಷಿದಾರರೇ ತರಾಟೆಗೆ ತೆಗೆದುಕೊಂಡಿದ್ದಾರೆ. 
ಡಿ.05 ರಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಾರಂಭವಾದ ವಿಚಾರಣೆಯ ವೇಳೆ ಕಪಿಲ್ ಸಿಬಲ್ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪನ್ನು 2019 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯವರೆಗೆ ಮುಂದೂಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಿಡಿ ಕಾರಿರುವ ಸುನ್ನಿ ವಕ್ಫ್ ಬೋರ್ಡ್ ಕಪಿಲ್ ಸಿಬಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೌದು ಕಪಿಲ್ ಸಿಬಲ್ ನಮ್ಮನ್ನು ಪ್ರತಿನಿಧಿಸುವ ವಕೀಲರು ಆದರೆ ಅವರು ರಾಜಕೀಯ ಪಕ್ಷವನ್ನೂ ಪ್ರತಿನಿಧಿಸುತ್ತಾರೆ. ನೆನ್ನೆ ಅವರು ಸುಪ್ರೀಂ ಕೋರ್ಟ್ ಗೆ ನೀಡಿರುವ ಹೇಳಿಕೆ ತಪ್ಪು, ನಮಗೆ ಸಮಸ್ಯೆಗೆ ಶೀಘ್ರ ಪರಿಹಾರ ಬೇಕು ಎಂದು  ಸುನ್ನಿ ವಕ್ಫ್ ಬೋರ್ಟ್ ನ ಮುಖ್ಯಸ್ಥ ಹಾಜಿ ಮೆಹಬೂಬ್ ಹೇಳಿದ್ದಾರೆ. 
ರಾಮ ಮಂದಿರ ವಿವಾದ ವಿಷಯದಲ್ಲಿ ಸುನ್ನಿ ವಕ್ಫ್ ಬೋರ್ಡ್ ನ್ನು ಪ್ರತಿನಿಧಿಸುತ್ತಿರುವ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸುನ್ನಿ ವಕ್ಫ್ ಬೋರ್ಡ್ ಸಹ ಕಪಿಲ್ ಸಿಬಲ್ ಹೇಳಿಕೆಯನ್ನು ಆಕ್ಷೇಪಿಸಿದೆ. ಇದೇ ವೇಳೆ ಕಾಂಗ್ರೆಸ್ ಸಹ ಸ್ಪಷ್ಟನೆ ನೀಡಿದ್ದು ಕಪಿಲ್ ಸಿಬಲ್ ಅವರ ಹೇಳಿಕೆಗಳು ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT