ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ನನ್ನ ವಾದಕ್ಕೆ ಜೆಎನ್ ಯು ಹೆದರುತ್ತದೆ ಆದ್ದರಿಂದ ರಾಮಮಂದಿರದ ಕುರಿತ ಕಾರ್ಯಕ್ರಮ ರದ್ದು: ಸ್ವಾಮಿ

ಜೆಎನ್ ಯು ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ರಾಮ ಮಂದಿರದ ಕುರಿತು ಡಿ.06 ರಂದು ನಡೆಯಬೇಕಿದ್ದ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರ ಉಪನ್ಯಾಸ ಕಾರ್ಯಕ್ರಮ ರದ್ದುಗೊಂಡಿದೆ.

ಜೆಎನ್ ಯು ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ರಾಮ ಮಂದಿರದ ಕುರಿತು ಡಿ.06 ರಂದು ನಡೆಯಬೇಕಿದ್ದ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರ ಉಪನ್ಯಾಸ ಕಾರ್ಯಕ್ರಮ ರದ್ದುಗೊಂಡಿದೆ. 
ಏಕಾಏಕಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಜೆಎನ್ ಯು ವಿಶ್ವವಿದ್ಯಾನಿಲಯ ತಮ್ಮ ವಾದಕ್ಕೆ ಹೆದರುತ್ತದೆ. ಆದ್ದರಿಂದ ಉಪನ್ಯಾಸವನ್ನು ರದ್ದುಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. 
ಇದೇ ವೇಳೆ ಜೆಎನ್ ಯು ವಿಶ್ವವಿದ್ಯಾನಿಲಯದ ಉಪಕುಲಪತಿ ಎಂ ಜಗಗೀಶ್ ಕುಮಾರ್ ಅವರಿಗೆ ಸ್ವಲ್ಪ ಧೈರ್ಯ ತೋರುವಂತೆ ಸಲಹೆ ನೀಡಿರುವ ಸುಬ್ರಹ್ಮಣಿಯನ್ ಸ್ವಾಮಿ , ಭದ್ರತೆಯ ಬಗ್ಗೆ ಆತಂಕವಿದ್ದರೆ ಉಪಕುಲಪತಿಗಳು ಈ ಮುನ್ನವೇ ತಿಳಿಸಬಹುದಿತು. ನಾವು ಪರ್ಯಾಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೆವು ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. 
ಬಾಬ್ರಿ ಮಸೀದಿ ಧ್ವಂಸಗೊಂಡ 25 ನೇ ವಾರ್ಷಿಕ ದಿನದ ಹಿನ್ನೆಲೆಯಲ್ಲಿ ಜೆಎನ್ ಯು ವಿವಿ ವಿದ್ಯಾರ್ಥಿಗಳ ಸಂಘಟನೆ ವೈ ರಾಮ್ ಮಂದಿರ್ ಇನ್ ಅಯೋಧ್ಯಾ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಸಲು ಮುಂದಾಗಿತ್ತು. ಆದರೆ ವಿವಿ ಕೊನೆ ಕ್ಷಣದಲ್ಲಿ ಅನುಮತಿಯನ್ನು ನಿರಾಕರಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT