ನಾನಾ ಪಟೋಳೆ 
ದೇಶ

ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿಗೆ ಗುಡ್ ಬೈ ಹೇಳಿದ ನಾನಾ ಪಟೋಳೆ

ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಶ್ನಿಸುವುದನ್ನು ಸಹಿಸುವುದಿಲ್ಲ ಎಂದಿದ್ದ ಮಹಾರಾಷ್ಟ್ರ ಬಿಜೆಪಿ ಸಂಸದ...

ನವದೆಹಲಿ/ಮುಂಬೈ: ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಶ್ನಿಸುವುದನ್ನು ಸಹಿಸುವುದಿಲ್ಲ ಎಂದಿದ್ದ ಮಹಾರಾಷ್ಟ್ರ ಬಿಜೆಪಿ ಸಂಸದ ನಾನಾ ಪಟೋಳೆ ಅವರು ಶುಕ್ರವಾರ ತಮ್ಮ ಸಂಸದ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ತಾವು ರಾಜಿನಾಮೆ ಪತ್ರ ಸಲ್ಲಿಸಿರುವುದಾಗಿ ಭಂಡಾರ-ಗೊಂಡಿಯಾ ಸಂಸದ ಪಟೋಳೆಯವರು ತಿಳಿಸಿದ್ದಾರೆ. ಅಲ್ಲದೆ ಬಿಜೆಪಿ ಅಧ್ಯಕ್ಷರಿಗೂ ರಾಜಿನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಸ್ಪೀಕರ್ ರಾಜಿನಾಮೆ ಪತ್ರ ಸಲ್ಲಿಸದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಳೆ ಅವರು, ನಾನು (ಬಿಜೆಪಿ) ಪಕ್ಷಕ್ಕೆ ಸೇರಿಕೊಂಡ ಉದ್ದೇಶಗಳನ್ನು ತಿರಸ್ಕರಿಸಲಾಗಿದೆ, ಆದರೆ ಈಗ ನಾನು ಸಂಪೂರ್ಣ ಸ್ವತಂತ್ರನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಪಕ್ಷದ ಸಂಸದರ ಸಭೆಯಲ್ಲಿ ತಾವು ಹಿಂದುಳಿದ ವರ್ಗಗಳ ಸಚಿವಾಲಯ ಮತ್ತು ರೈತರ ಆತ್ಮಹತ್ಯೆ ವಿಚಾರಗಳನ್ನು ಪ್ರಸ್ತಾಪಿಸಲು ಮುಂದಾದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಾಯಿ ಮುಚ್ಚಿಕೊಂಡಿರುವಂತೆ ಸೂಚಿಸಿದರು. ಅಲ್ಲದೇ, ನನ್ನ ಮೇಲೆ ಸಿಟ್ಟಿಗೆದ್ದರು ಎಂದಿದ್ದರು ಪಟೋಳೆ ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಳಸಾ-ಬಂಡೂರಿ, ಮೇಕೆದಾಟು ಯೋಜನೆ ವಿಳಂಬಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಿಎಂ ಸಿದ್ದರಾಮಯ್ಯ

ಬಳ್ಳಾರಿ: ತೆಕ್ಕಲಕೋಟೆ ಉತ್ಖನನದಲ್ಲಿ ಮಾನವ ಅಸ್ಥಿಪಂಜರ ಪತ್ತೆ, 3,000-5,000 ವರ್ಷ ಹಳೆಯದೆಂದು ತಜ್ಞರ ಅಂದಾಜು

ನಿಯತ್ತು ನಿಷ್ಠೆ ಇಲ್ಲದವರನ್ನು ಇಟ್ಟುಕೊಳ್ಳಬೇಕಾ? GTD ನಮ್ಮ ಜೊತೆಯಲ್ಲಿಲ್ಲ; ಸಮಯ ಬಂದಾಗ ರಾಜ್ಯ ರಾಜಕೀಯಕ್ಕೆ ವಾಪಸ್!

ಪೈಲಟ್ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ನಲ್ಲಿ ಗೊಂದಲ! ಅಧಿಕಾರಿಗಳ ಗಲಿಬಿಲಿ

'ಸಿ ಗ್ರೇಡ್ ಸಿನಿಮಾಗಿಂತ ಕಳಪೆ': ಪಾಕ್ ಸಂಪರ್ಕ ಆರೋಪಕ್ಕೆ ಗೊಗೋಯ್ ತಿರುಗೇಟು!

SCROLL FOR NEXT