ನಾನಾ ಪಟೋಳೆ 
ದೇಶ

ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿಗೆ ಗುಡ್ ಬೈ ಹೇಳಿದ ನಾನಾ ಪಟೋಳೆ

ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಶ್ನಿಸುವುದನ್ನು ಸಹಿಸುವುದಿಲ್ಲ ಎಂದಿದ್ದ ಮಹಾರಾಷ್ಟ್ರ ಬಿಜೆಪಿ ಸಂಸದ...

ನವದೆಹಲಿ/ಮುಂಬೈ: ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಶ್ನಿಸುವುದನ್ನು ಸಹಿಸುವುದಿಲ್ಲ ಎಂದಿದ್ದ ಮಹಾರಾಷ್ಟ್ರ ಬಿಜೆಪಿ ಸಂಸದ ನಾನಾ ಪಟೋಳೆ ಅವರು ಶುಕ್ರವಾರ ತಮ್ಮ ಸಂಸದ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ತಾವು ರಾಜಿನಾಮೆ ಪತ್ರ ಸಲ್ಲಿಸಿರುವುದಾಗಿ ಭಂಡಾರ-ಗೊಂಡಿಯಾ ಸಂಸದ ಪಟೋಳೆಯವರು ತಿಳಿಸಿದ್ದಾರೆ. ಅಲ್ಲದೆ ಬಿಜೆಪಿ ಅಧ್ಯಕ್ಷರಿಗೂ ರಾಜಿನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಸ್ಪೀಕರ್ ರಾಜಿನಾಮೆ ಪತ್ರ ಸಲ್ಲಿಸದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಳೆ ಅವರು, ನಾನು (ಬಿಜೆಪಿ) ಪಕ್ಷಕ್ಕೆ ಸೇರಿಕೊಂಡ ಉದ್ದೇಶಗಳನ್ನು ತಿರಸ್ಕರಿಸಲಾಗಿದೆ, ಆದರೆ ಈಗ ನಾನು ಸಂಪೂರ್ಣ ಸ್ವತಂತ್ರನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಪಕ್ಷದ ಸಂಸದರ ಸಭೆಯಲ್ಲಿ ತಾವು ಹಿಂದುಳಿದ ವರ್ಗಗಳ ಸಚಿವಾಲಯ ಮತ್ತು ರೈತರ ಆತ್ಮಹತ್ಯೆ ವಿಚಾರಗಳನ್ನು ಪ್ರಸ್ತಾಪಿಸಲು ಮುಂದಾದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಾಯಿ ಮುಚ್ಚಿಕೊಂಡಿರುವಂತೆ ಸೂಚಿಸಿದರು. ಅಲ್ಲದೇ, ನನ್ನ ಮೇಲೆ ಸಿಟ್ಟಿಗೆದ್ದರು ಎಂದಿದ್ದರು ಪಟೋಳೆ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT