ಜೆ.ಪಿ. ನಾಡ್ಡಾ 
ದೇಶ

ಭಾರತವು ಟ್ರಕೋಮಾ ಸೋಂಕು ಮುಕ್ತ ರಾಷ್ಟ್ರ: ಕೇಂದ್ರ ಸಚಿವ ಜೆ.ಪಿ. ನಾಡ್ಡಾ ಘೊಷಣೆ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಾಡ್ಡಾ ಅವರು ಮಕ್ಕಳಲ್ಲಿ ಸಾಂಕ್ರಾಮಿಕ ಕುರುಡುತನಕ್ಕೆ ಪ್ರಮುಖ ಕಾರಣವಾಗುವ ಸೋಂಕು ಟ್ರಕೋಮಾ ದಿಂದ ಭಾರತ....

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಾಡ್ಡಾ ಅವರು ಮಕ್ಕಳಲ್ಲಿ ಸಾಂಕ್ರಾಮಿಕ ಕುರುಡುತನಕ್ಕೆ ಪ್ರಮುಖ ಕಾರಣವಾಗುವ ಸೋಂಕು ಟ್ರಕೋಮಾ  ದಿಂದ ಭಾರತ ಮುಕ್ತವಾಗಿದೆ ಎಂದು ಘೋಷಿಸಿದ್ದಾರೆ.  ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್) ನ ನೇತ್ರವಿಜ್ಞಾನ ವಿಭಾಗದಲ್ಲಿ ನೆರೆದಿದ್ದ  ಹಿರಿಯ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ಸಚಿವರು ಈ  ಘೋಷಣೆ ಮಾಡಿದ್ದಾರೆ.
"ಸಮೀಕ್ಷೆ ನಡೆಸಿದ್ದ ಎಲ್ಲಾ ಜಿಲ್ಲೆಗಳಲ್ಲಿ ಒತ್ಟಾರೆ ಕೇವಲ ಶೇ. 0.7ರಷ್ಟು ಮಕ್ಕಳಲ್ಲಿ ಮಾತ್ರವೇ ಈ ಟ್ರಕೋಮಾ ಸೋಂಕು ಕಂಡು ಬಂದಿದೆ. ಇದು ಡಬ್ಲ್ಯೂಎಚ್ ಓ ನಿಂದ ವ್ಯಾಖ್ಯಾನಿಸಲ್ಪಟ್ಟಿರುವ ಟ್ರಾಕೊಮಾದ ಸೋಂಕಿನ  ಮಾನದಂಡಕ್ಕಿಂತ ಕಡಿಮೆಯಾಗಿದೆ. ಸಮೀಕ್ಷೆಯ  ಪ್ರಕಾರ, ಮಕ್ಕಳಲ್ಲಿ ಸಕ್ರಿಯ ಟ್ರಾಕೊಮಾ ಸೋಂಕು ಕಾಣಿಸಿಕೊಂಡಿಲ್ಲ." ಎಂದು ಸಚಿವ ನಾಡ್ಡಾ  ಹೇಳಿದ್ದಾರೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಸಕ್ರಿಯ ಸೋಂಕಿನ ಪ್ರಮಾಣವು ಶೇಕಡಾ 5 ಕ್ಕಿಂತ ಕಡಿಮೆಯಿದ್ದರೆ ಅಂತಹಾ ದೇಶವನ್ನು ಟ್ರಕೋಮಾ ಸೋಂಕು ಮುಕ್ತ ಪ್ರದೇಶವೆಂದು ಘೊಷಿಸಲಾಗುತ್ತದೆ
ವೈದ್ಯಕೀಯ ವಿಜ್ಞಾನಗಳ ಪ್ರಕಾರ, ಟ್ರಕೋಮಾ ಕಣ್ಣಿನ ದೀರ್ಘಕಾಲದ ಸೋಂಕಿನ ಕಾಯಿಲೆಯಾಗಿದ್ದು, ಮಕ್ಕಳಲ್ಲಿ ಕುರುಡುತನ ಕಾಣಿಸಿಕೊಳ್ಳುವ ಪ್ರಮುಖ ಕಾರಣವಾಗಿದೆ. ಕಲುಷಿತ  ಪರಿಸರ ಮತ್ತು ನೈರ್ಮಲ್ಯ ಕೊರತೆ ಯಿಂದಾಗಿ ಈ ಸೋಂಕು ಕಾಣಿಸಿಕೊಳ್ಳುತ್ತದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT