ಜೆ.ಪಿ. ನಾಡ್ಡಾ 
ದೇಶ

ಭಾರತವು ಟ್ರಕೋಮಾ ಸೋಂಕು ಮುಕ್ತ ರಾಷ್ಟ್ರ: ಕೇಂದ್ರ ಸಚಿವ ಜೆ.ಪಿ. ನಾಡ್ಡಾ ಘೊಷಣೆ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಾಡ್ಡಾ ಅವರು ಮಕ್ಕಳಲ್ಲಿ ಸಾಂಕ್ರಾಮಿಕ ಕುರುಡುತನಕ್ಕೆ ಪ್ರಮುಖ ಕಾರಣವಾಗುವ ಸೋಂಕು ಟ್ರಕೋಮಾ ದಿಂದ ಭಾರತ....

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಾಡ್ಡಾ ಅವರು ಮಕ್ಕಳಲ್ಲಿ ಸಾಂಕ್ರಾಮಿಕ ಕುರುಡುತನಕ್ಕೆ ಪ್ರಮುಖ ಕಾರಣವಾಗುವ ಸೋಂಕು ಟ್ರಕೋಮಾ  ದಿಂದ ಭಾರತ ಮುಕ್ತವಾಗಿದೆ ಎಂದು ಘೋಷಿಸಿದ್ದಾರೆ.  ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್) ನ ನೇತ್ರವಿಜ್ಞಾನ ವಿಭಾಗದಲ್ಲಿ ನೆರೆದಿದ್ದ  ಹಿರಿಯ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ಸಚಿವರು ಈ  ಘೋಷಣೆ ಮಾಡಿದ್ದಾರೆ.
"ಸಮೀಕ್ಷೆ ನಡೆಸಿದ್ದ ಎಲ್ಲಾ ಜಿಲ್ಲೆಗಳಲ್ಲಿ ಒತ್ಟಾರೆ ಕೇವಲ ಶೇ. 0.7ರಷ್ಟು ಮಕ್ಕಳಲ್ಲಿ ಮಾತ್ರವೇ ಈ ಟ್ರಕೋಮಾ ಸೋಂಕು ಕಂಡು ಬಂದಿದೆ. ಇದು ಡಬ್ಲ್ಯೂಎಚ್ ಓ ನಿಂದ ವ್ಯಾಖ್ಯಾನಿಸಲ್ಪಟ್ಟಿರುವ ಟ್ರಾಕೊಮಾದ ಸೋಂಕಿನ  ಮಾನದಂಡಕ್ಕಿಂತ ಕಡಿಮೆಯಾಗಿದೆ. ಸಮೀಕ್ಷೆಯ  ಪ್ರಕಾರ, ಮಕ್ಕಳಲ್ಲಿ ಸಕ್ರಿಯ ಟ್ರಾಕೊಮಾ ಸೋಂಕು ಕಾಣಿಸಿಕೊಂಡಿಲ್ಲ." ಎಂದು ಸಚಿವ ನಾಡ್ಡಾ  ಹೇಳಿದ್ದಾರೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಸಕ್ರಿಯ ಸೋಂಕಿನ ಪ್ರಮಾಣವು ಶೇಕಡಾ 5 ಕ್ಕಿಂತ ಕಡಿಮೆಯಿದ್ದರೆ ಅಂತಹಾ ದೇಶವನ್ನು ಟ್ರಕೋಮಾ ಸೋಂಕು ಮುಕ್ತ ಪ್ರದೇಶವೆಂದು ಘೊಷಿಸಲಾಗುತ್ತದೆ
ವೈದ್ಯಕೀಯ ವಿಜ್ಞಾನಗಳ ಪ್ರಕಾರ, ಟ್ರಕೋಮಾ ಕಣ್ಣಿನ ದೀರ್ಘಕಾಲದ ಸೋಂಕಿನ ಕಾಯಿಲೆಯಾಗಿದ್ದು, ಮಕ್ಕಳಲ್ಲಿ ಕುರುಡುತನ ಕಾಣಿಸಿಕೊಳ್ಳುವ ಪ್ರಮುಖ ಕಾರಣವಾಗಿದೆ. ಕಲುಷಿತ  ಪರಿಸರ ಮತ್ತು ನೈರ್ಮಲ್ಯ ಕೊರತೆ ಯಿಂದಾಗಿ ಈ ಸೋಂಕು ಕಾಣಿಸಿಕೊಳ್ಳುತ್ತದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT