ನಾನಾ ಪಟೋಳೆ 
ದೇಶ

ಪ್ರಧಾನಿ ಮೋದಿ ರಾಜಕೀಯ ಲಾಭಕ್ಕಾಗಿ ಒಬಿಸಿ ಕಾರ್ಡ್ ಬಳಸುತ್ತಿದ್ದಾರೆ: ನಾನಾ ಪಟೋಳೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ಒಬಿಸಿ ಕಾರ್ಡ್ ಬಳಸುತ್ತಿದ್ದಾರೆ ಎಂದು ನಿನ್ನೆ ಸಂಸದ ಹಾಗೂ ಬಿಜೆಪಿಗೆ....

ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ಒಬಿಸಿ ಕಾರ್ಡ್ ಬಳಸುತ್ತಿದ್ದಾರೆ ಎಂದು ನಿನ್ನೆ ಸಂಸದ ಹಾಗೂ ಬಿಜೆಪಿಗೆ ರಾಜಿನಾಮೆ ನೀಡಿದ ನಾನಾ ಪಟೋಳೆ ಅವರು ಶನಿವಾರ ಆರೋಪಿಸಿದ್ದಾರೆ.
ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಟೋಳೆ ಅವರು, ಬಿಜೆಪಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ದ್ವಿಮುಖ ನಿಲುವು ಹೊಂದಿದ್ದು, ರಾಜಕೀಯ ಲಾಭಕ್ಕಾಗಿ ಹಿಂದೂಳಿದ ವರ್ಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ ಒಬಿಸಿಗೆ ಮತ್ತು ರೈತರಿಗಾಗಿ ಯಾವುದೇ ಕೆಲಸ ಮಾಡಿಲ್ಲ ಪಟೋಳೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಳೆದ ವರ್ಷ ನಡೆದ ಪಕ್ಷದ ಸಂಸದರ ಸಭೆಯಲ್ಲಿ ನಾನು ಹಿಂದೂಳಿದ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದೆ. ಅಲ್ಲದೆ ಒಬಿಸಿಗೆ ಪ್ರತ್ಯೇಕ ಸಚಿವಾಲಯ ಬೇಕು ಎಂದು ಒತ್ತಾಯಿಸಿದ್ದೆ. ಇದರಿಂದ ಆಕ್ರೋಶಗೊಂಡ ಮೋದಿ, ಒಬಿಸಿಗೆ ಪ್ರತ್ಯೇಕ ಸಚಿವಾಲಯದ ಅಗತ್ಯ ಇಲ್ಲ ಎಂದಿದ್ದರು. ಆದರೆ ಈಗ ಒಬಿಸಿ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ ಎಂದು ಪಟೋಳೆ ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT