ಸಂಗ್ರಹ ಚಿತ್ರ 
ದೇಶ

ಅನೈತಿಕ ಸಂಬಂಧ ಪ್ರಕರಣಗಳಲ್ಲಿ ಪುರುಷರಿಗೆ ಮಾತ್ರ ಏಕೆ ಶಿಕ್ಷೆ?: ಸುಪ್ರೀಂ ಕೋರ್ಟ್ ಪ್ರಶ್ನೆ

ಅನೈತಿಕ ಸಂಬಂಧ ಅಥವಾ ವ್ಯಭಿಚಾರ ಪ್ರಕರಣದಲ್ಲಿ ಪರ ಹೆಂಗಸಿನೊಂದಿಗೆ ಸರವಾಡಿದ ಗಂಡಸನನ್ನೇ ಏಕೆ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ನವದೆಹಲಿ: ಅನೈತಿಕ ಸಂಬಂಧ ಅಥವಾ ವ್ಯಭಿಚಾರ ಪ್ರಕರಣದಲ್ಲಿ ಪರ ಹೆಂಗಸಿನೊಂದಿಗೆ ಸರವಾಡಿದ ಗಂಡಸನನ್ನೇ ಏಕೆ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.
ಐಪಿಸಿ ಸೆಕ್ಷನ್ 497ನ್ನು ಪ್ರಶ್ನಿಸಿ ದಾಖಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅನೈತಿಕ ಸಂಬಂಧ ಪ್ರಕರಣಗಳಲ್ಲಿ ಪರಸ್ಪರ ಒಪ್ಪಿಗೆ ನೀಡಿ ಲೈಂಗಿಕ ಕ್ರಿಯೆ  ನಡೆಸಿದ ಹೆಂಗಸು ಕೂಡ ಅಪರಾಧಿಯಲ್ಲವೆ? ಆಕೆಯನ್ನೇಕೆ ಶಿಕ್ಷಿಸಬಾರದು? ಎಂದು ಕೇಳಿ ಇದಕ್ಕೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅನೈತಿಕ ಸಂಬಂಧ ಮಾಡಿದ ಗಂಡಸನ್ನು ಮಾತ್ರ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸುವ ಭಾರತೀಯ ದಂಡ ಸಂಹಿತೆಯ 497 ಸೆಕ್ಷನ್ ನಲ್ಲಿನ ನಿಯಮವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಈ ನಿಯಮ ಮಹಿಳಾ  ಪರವಾಗಿದೆ. ತಪ್ಪು ಮಾಡಿದ ಹೆಂಗಸರನ್ನು ಆರೋಪದಿಂದ ತಪ್ಪಿಸಿಕೊಳ್ಳುವಂತೆ ಮಾಡುತ್ತದೆ. ಗಂಡಸರಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಜೋಸೆಫ್ ಶೈನ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿತಾರಣೆ ನಡೆಸಿದ ನ್ಯಾಯಾಲಯ ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ತಪ್ಪಿತಸ್ಥ ಪುರಷನನ್ನು ಮಾತ್ರ ಶಿಕ್ಷೆಗೊಳಪಡಿಸಲಾಗುತ್ತದೆ. ಅದೇ ಪ್ರಕರಣದಲ್ಲಿ ಭಾಗಿಯಾದ  ಮಹಿಳೆ ಶಿಕ್ಷೆಗೊಳಪಡುವುದಿಲ್ಲ. ಇದು ದುರ್ಬಳಕೆಗೆ ಕಾರಣವಾಗಿದೆ. ಸಂವಿಧಾನ ಯಾವಾಗಲೂ ತಟಸ್ಥವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಹಿಂದೆ ಡಿಸೆಂಬರ್ 3ರಂದು ನಡೆದಿದ್ದ ವಿಚಾರಣೆ ವೇಳೆ ಇಂತಹುದೇ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್, ವಿವಾಹಿತ ಮಹಿಳೆಯ ಅನುಮತಿ ಮೇರೆಗೆ ಆಕೆಯೊಂದಿಗೆ ಲೈಂಗಿಕ ಕ್ರಿಯ ನಡೆಸಿದ ಪುರುಷನದ್ದು ತಪ್ಪು ಎಂದಾದರೇ  ಪುರುಷನ ಅನುಮತಿ ಇಲ್ಲದೇ ಪರಪುರುಷನೊಂದಿಗೆ ಮಲಗುವುದೂ ಕೂಡ ಅಪರಾಧ. ಹೀಗಾಗಿ ಅವರ ಹೆಸರೇಕೆ ಬಹಿರಂಗ ಪಡಿಸಬಾರದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಅಭಿಪ್ರಾಯ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ