’ಪಾಕಿಸ್ತಾನ ಹೈ ಕಮಿಷನರ್ ನ್ನು ಮಣಿಶಂಕರ್ ಅಯ್ಯರ್ ಭೇಟಿ ಆದದ್ದೇಕೆ?’ ಮೋದಿ ಪ್ರಶ್ನೆ 
ದೇಶ

’ಪಾಕಿಸ್ತಾನ ಹೈ ಕಮಿಷನರ್ ನ್ನು ಮಣಿಶಂಕರ್ ಅಯ್ಯರ್ ಭೇಟಿ ಆದದ್ದೇಕೆ?’ ಮೋದಿ ಪ್ರಶ್ನೆ

"ನನಗೂ, ಗುಜರಾತಿನ ಜನತೆಗೂ ಅಪಮಾನ ಮಾಡಿದ್ದ ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ಹೈ ಕಮಿಷನರ್ ಅವರನ್ನು ಭೇಟಿಯಾಗಿದ್ದಾರೆ........

ಬನಸ್ಕಾಂತ(ಗುಜರಾತ್): "ನನಗೂ, ಗುಜರಾತಿನ ಜನತೆಗೂ ಅಪಮಾನ ಮಾಡಿದ್ದ ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ಹೈ ಕಮಿಷನರ್ ಅವರನ್ನು ಭೇಟಿಯಾಗಿದ್ದಾರೆ ಎನ್ನುವ ವರದಿ ಬಂದಿದೆ.ಇದರ ಉದ್ದೇಶವೇನು?" ಮೋದಿ ಗುಜರಾತಿನಲ್ಲಿ ಪ್ರಶ್ನೆ ಮಾಡುವ ಮೂಲಕ ಮಣಿಶಂಕರ್ ಅಯ್ಯರ್ ನ್ನು ಬಹಿರಂಗವಾಗಿ ಟಿಕಿಸಿದರು..
ಗುಜರಾತಿನ  ಬನಸ್ಕಾಂತ ಜಿಲ್ಲೆಯ  ಪಲನ್ಪುರ್ ನಲ್ಲಿ ಬಹಿರಂಗ ಸಮಾವೇಶವನ್ನುದ್ದೇಶಿಸಿ ಮಾತನಾಡಿದ  ಮೋದಿ "ಪಾಕಿಸ್ತಾನದ ಸೇನೆಯ ಉನ್ನತಾಧಿಕಾರಿಗಳು ಕಾಂಗ್ರೆಸ್ ನ ಅಹಮದ್ ಪಟೇಲ್ ರನ್ನು ಗುಜರಾತಿನ ಮುಖ್ಯಮಂತ್ರಿಯಾಗಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ! ಇದೇಕೆ ಪಾಕಿಸ್ತಾನ ಕಾಂಗ್ರೆಸ್ ಪಕ್ಷಕ್ಕೆ ಸಹಾಯ ಮಾಡುತ್ತಿದೆ?" ಎಂದು ಪ್ರಶ್ನಿಸಿದ್ದಾರೆ.
ಆಲೂಗಡ್ಡೆ  ಬೆಳೆಯುವಲ್ಲಿ ಈ ಜಿಲ್ಲೆಯ ರೈತರ ಯಶೋಗಾಥೆ ಇಡೀ ದೇಶಕ್ಕೆ ಮಾದರಿಯಾಗಿದೆ. ಎಂದ ಪ್ರಧಾನಿ ರೈತರ ಸಾಹಸ, ಶ್ರಮವನ್ನು ಕೊಂಡಾಡಿದ್ದಾರೆ.
ಗುಜರಾತಿನಲ್ಲಿ ಡಿ.14ರಂದು ಎರಡನೇ ಹಂತದ ಮತದಾನ ನಡೆಯಲಿದ್ದು ಡಿ.18ಕ್ಕೆ ಫಲಿತಾಂಶ ಹೊರಹೊಮ್ಮಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT