ಪೆರಿಯಪೆಂಡಿ 
ದೇಶ

ರಾಜಸ್ತಾನದಲ್ಲಿ ದರೋಡೆಕೋರರ ಗುಂಡಿಗೆ ಚೆನ್ನೈ ಪೊಲೀಸ್ ಇನ್ಸ್ ಪೆಕ್ಟರ್ ಬಲಿ

ಚಿನ್ನ ದರೋಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಚೆನ್ನೈನ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬುಧವಾರ....

ಚೆನ್ನೈ: ಚಿನ್ನ ದರೋಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಚೆನ್ನೈನ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬುಧವಾರ ರಾಜಸ್ತಾನದಲ್ಲಿ ನಡೆದಿದೆ.
ದರೋಡೆಕೋರರನ್ನು ಬಂಧಿಸುವುದಕ್ಕಾಗಿ ಚೆನ್ನೈ ಪೊಲೀಸ್ ಇನ್ಸ್ ಪೆಕ್ಟರ್ ಪೆರಿಯಪಂಡಿ ನೇತೃತ್ವದ ತಂಡ ರಾಜಸ್ತಾನದ ಪಾಲಿ ಜಿಲ್ಲೆಗೆ ತೆರಳಿತ್ತು, ಈ ವೇಳೆ ಶಂಕಿತ ದರೋಡೆಕೋರರ ಬೆನ್ನಟ್ಟಿ ಹೋಗಿದ್ದ ಪೆರಿಯಪಂಡಿ ಅವರನ್ನು ಅವರದ್ದೇ ರಿವಾಲ್ವರ್ ನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.
ಚೆನ್ನೈನ ಮದುರಾವೋಯಲ್ ಠಾಣೆಯಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಪೆರಿಯಪಂಡಿ ಅವರು, ಕಳೆದ ತಿಂಗಳು ಕೊಲಾಥೂರ್ ಎಂಬಲ್ಲಿ ಸುರಂಗ ತೋಡಿ 3.5 ಕೆಜಿ ಚಿನ್ನ ದೋಚಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದರು.
ರಾಜಸ್ತಾನದ ಮರುಭೂಮಿಯ ಸಮೀಪ ದರೋಡೆಕೋರರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಅವರಲ್ಲಿ ಒಬ್ಬನನ್ನು ಇನ್ಸ್ ಪೆಕ್ಟರ್ ಹಿಡಿದಿದ್ದರು. ಹೊರಕ್ಕೆ ಕರೆದುಕೊಂಡು ಬರುತ್ತಿರುವಾಗ ಆತ ರಿವಾಲ್ವರ್ ಕಸಿದುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ.
ಇನ್ಸ್ ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದು, ಜೊತೆಗಿದ್ದ ಪೊಲೀಸರಿಗೆ ಗಾಯಗಳಾಗಿವೆ. ಇಂದು ಬೆಳಗಿನ ಜಾವ 2.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರ ಎಸ್ಕೇಪ್ ಆಗಿದ್ದಾನೆ. ನವೆಂಬರ್ 16ರಂದು ಚೆನ್ನೈನ ಆಭರಣ ಮಳಿಗೆಯಲ್ಲಿ ಕಳ್ಳತನ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT