ಅಮರನಾಥ ದೇವಾಲಯದಲ್ಲಿ ಮಂತ್ರ ಹೇಳುವಂತಿಲ್ಲ, ಘಂಟಾನಾದ ಮಾಡುವಂತಿಲ್ಲ, ಹಸಿರು ಪೀಠ ಆದೇಶ 
ದೇಶ

ಅಮರನಾಥ ದೇವಾಲಯದಲ್ಲಿ ಮಂತ್ರ ಹೇಳುವಂತಿಲ್ಲ, ಘಂಟಾನಾದ ಮಾಡುವಂತಿಲ್ಲ, ಹಸಿರು ಪೀಠ ಆದೇಶ

ಅಮರನಾಥ ಗುಹೆಯಲ್ಲಿ ಮಂತ್ರಗಳ ಪಠಣಕ್ಕೆ ರಾಷ್ಟ್ರೀಯ ಹಸಿಉರು ಪೀಠವು ನಿಷೇಧ ಹೇರಿದೆ.

ನವದೆಹಲಿ: ಅಮರನಾಥ ಗುಹೆಯಲ್ಲಿ ಮಂತ್ರಗಳ ಪಠಣಕ್ಕೆ ರಾಷ್ಟ್ರೀಯ ಹಸಿಉರು ಪೀಠವು ನಿಷೇಧ ಹೇರಿದೆ. ಅಮರನಾಥ ಗುಹಾ ದೇವಾಲಯ ಆಡಳಿತ ಮಂಡಳಿಗೆ  ಈ ಕುರಿತಂತೆ ಪೀಠವು ಆದೇಶ ನೀಡಿದೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಯಾತ್ರಾರ್ಥಿಗಳಿಗೆ ಸಾಕಷ್ಟು ಮೂಲಭೂತ ಸೌಕರ್ಯ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಹಸಿರು ಪೀಠವು ಕಳೆದ ತಿಂಗಳು ಅಮರನಾಥ ದೇವಾಲಯ ಮಂಡಳಿಯಿಂದ ಆಡಳಿತವನ್ನು ತಾನು ವಹಿಸಿಕೊಂಡಿತ್ತು. ಹೀಗೆ ಆಡಳಿತ ತನ್ನ ವಶಕ್ಕೆ ಬಂದ ಬಳಿಕ ಪೀಠ ಈ ಆದೇಶ ಹೊರಡಿಸಿದೆ.
ಬುಧವಾರ, ಮುಖ್ಯ ನ್ಯಾಯಮೂರ್ತಿ ಸ್ವಾತಂತರ್ ಕುಮಾರ್ ನೇತೃತ್ವದ ಎನ್ ಜಿಟಿ ಪೀಠವು ಗುಹಾ ದೇವಾಲಯದಲ್ಲಿ ಘಂಟಾನಾದ ಮಾಡುವಂತಿಲ್ಲ ಎಂದು ಹೇಳಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಸಮುದ್ರ ಮಟ್ಟದಿಂದ 3,888 ಮೀಟರುಗಳಷ್ಟು ಎತ್ತರದಲ್ಲಿರುವ ಈ ದೇವಾಲಯ ಪ್ರವೇಶಿಸಲು ಭಕ್ತರು ತಮ್ಮ  ಮೊಬೈಲ್ ಮತ್ತು ಇತರೆ ಲಗೇಜ್ ಗಳನ್ನು ಕೊನೆಯ ಚೆಕ್ ಪೋಸ್ಟ್ ನಲ್ಲಿ ಇರಿಸಬೇಕಾಗಿತ್ತು
ದೇವಾಲಯದ ಆವರಣದಲ್ಲಿ ಯಾವ ಮಂತ್ರೋದ್ಘಾರವಾಗಲಿ, ಜೈಕಾರಗಳಾಗಲೀ ಕೇಳಿ ಬರಬಾರದೆಂದು ಹಸಿರು ಪೀಠವು ಹೇಳಿದ್ದು ದೇವಾಲಯದ ಆಡಳಿತ ವಹಿಸಿಕೊಂಡವರು ಈ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದಿದೆ. ಅಲ್ಲದೆ ಕಡೆಯ ಚೆಕ್ ಪೋಸ್ಟ್ ನಿಂದ ನಂತರ ಜನರು ಒಂದೇ ಸಾಲಿನಲ್ಲಿ ಚಲಿಸಿ ದೇವಾಲಯವನ್ನು ಪ್ರವೇಶಿಸಬೇಕೆಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT