ಅಮರನಾಥ ದೇವಾಲಯದಲ್ಲಿ ಮಂತ್ರ ಹೇಳುವಂತಿಲ್ಲ, ಘಂಟಾನಾದ ಮಾಡುವಂತಿಲ್ಲ, ಹಸಿರು ಪೀಠ ಆದೇಶ 
ದೇಶ

ಅಮರನಾಥ ದೇವಾಲಯದಲ್ಲಿ ಮಂತ್ರ ಹೇಳುವಂತಿಲ್ಲ, ಘಂಟಾನಾದ ಮಾಡುವಂತಿಲ್ಲ, ಹಸಿರು ಪೀಠ ಆದೇಶ

ಅಮರನಾಥ ಗುಹೆಯಲ್ಲಿ ಮಂತ್ರಗಳ ಪಠಣಕ್ಕೆ ರಾಷ್ಟ್ರೀಯ ಹಸಿಉರು ಪೀಠವು ನಿಷೇಧ ಹೇರಿದೆ.

ನವದೆಹಲಿ: ಅಮರನಾಥ ಗುಹೆಯಲ್ಲಿ ಮಂತ್ರಗಳ ಪಠಣಕ್ಕೆ ರಾಷ್ಟ್ರೀಯ ಹಸಿಉರು ಪೀಠವು ನಿಷೇಧ ಹೇರಿದೆ. ಅಮರನಾಥ ಗುಹಾ ದೇವಾಲಯ ಆಡಳಿತ ಮಂಡಳಿಗೆ  ಈ ಕುರಿತಂತೆ ಪೀಠವು ಆದೇಶ ನೀಡಿದೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಯಾತ್ರಾರ್ಥಿಗಳಿಗೆ ಸಾಕಷ್ಟು ಮೂಲಭೂತ ಸೌಕರ್ಯ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಹಸಿರು ಪೀಠವು ಕಳೆದ ತಿಂಗಳು ಅಮರನಾಥ ದೇವಾಲಯ ಮಂಡಳಿಯಿಂದ ಆಡಳಿತವನ್ನು ತಾನು ವಹಿಸಿಕೊಂಡಿತ್ತು. ಹೀಗೆ ಆಡಳಿತ ತನ್ನ ವಶಕ್ಕೆ ಬಂದ ಬಳಿಕ ಪೀಠ ಈ ಆದೇಶ ಹೊರಡಿಸಿದೆ.
ಬುಧವಾರ, ಮುಖ್ಯ ನ್ಯಾಯಮೂರ್ತಿ ಸ್ವಾತಂತರ್ ಕುಮಾರ್ ನೇತೃತ್ವದ ಎನ್ ಜಿಟಿ ಪೀಠವು ಗುಹಾ ದೇವಾಲಯದಲ್ಲಿ ಘಂಟಾನಾದ ಮಾಡುವಂತಿಲ್ಲ ಎಂದು ಹೇಳಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಸಮುದ್ರ ಮಟ್ಟದಿಂದ 3,888 ಮೀಟರುಗಳಷ್ಟು ಎತ್ತರದಲ್ಲಿರುವ ಈ ದೇವಾಲಯ ಪ್ರವೇಶಿಸಲು ಭಕ್ತರು ತಮ್ಮ  ಮೊಬೈಲ್ ಮತ್ತು ಇತರೆ ಲಗೇಜ್ ಗಳನ್ನು ಕೊನೆಯ ಚೆಕ್ ಪೋಸ್ಟ್ ನಲ್ಲಿ ಇರಿಸಬೇಕಾಗಿತ್ತು
ದೇವಾಲಯದ ಆವರಣದಲ್ಲಿ ಯಾವ ಮಂತ್ರೋದ್ಘಾರವಾಗಲಿ, ಜೈಕಾರಗಳಾಗಲೀ ಕೇಳಿ ಬರಬಾರದೆಂದು ಹಸಿರು ಪೀಠವು ಹೇಳಿದ್ದು ದೇವಾಲಯದ ಆಡಳಿತ ವಹಿಸಿಕೊಂಡವರು ಈ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದಿದೆ. ಅಲ್ಲದೆ ಕಡೆಯ ಚೆಕ್ ಪೋಸ್ಟ್ ನಿಂದ ನಂತರ ಜನರು ಒಂದೇ ಸಾಲಿನಲ್ಲಿ ಚಲಿಸಿ ದೇವಾಲಯವನ್ನು ಪ್ರವೇಶಿಸಬೇಕೆಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!