ಸಾಂದರ್ಭಿಕ ಚಿತ್ರ 
ದೇಶ

ಓಖಿ ಚಂಡಮಾರುತ: 15 ದಿನ ಕಳೆಯಿತು, ಇನ್ನೂ 600 ಮೀನುಗಾರರು ನಾಪತ್ತೆ

ಓಖಿ ಚಂಡಮಾರುತ ತಮಿಳುನಾಡು ಹಾಗೂ ಕೇರಳ ಕರಾವಳಿಗೆ ಅಪ್ಪಳಿಸಿ 15 ದಿನ ಕಳೆದಿದೆ. ಆದರೆ ಎರಡೂ ರಾಜ್ಯಗಳ 600ಕ್ಕೂ ಹೆಚ್ಚು....

ನವದೆಹಲಿ: ಓಖಿ ಚಂಡಮಾರುತ ತಮಿಳುನಾಡು ಹಾಗೂ ಕೇರಳ ಕರಾವಳಿಗೆ ಅಪ್ಪಳಿಸಿ 15 ದಿನ ಕಳೆದಿದೆ. ಆದರೆ ಎರಡೂ ರಾಜ್ಯಗಳ 600ಕ್ಕೂ ಹೆಚ್ಚು ಮೀನುಗಾರರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಗುರುವಾರ ಗೃಹ ಸಚಿವಾಲಯ ತಿಳಿಸಿದೆ.
ತಮಿಳುನಾಡಿನ 433 ಮೀನುಗಾರರು ಹಾಗೂ ಕೇರಳದ 186 ಮೀನುಗಾರರು ಇನ್ನೂ ನಾಪತ್ತೆಯಾಗಿದ್ದು, ಅವರ ಪತ್ತೆಯಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯೆ, ಡಿಸೆಂಬರ್ 2ರಂದು ಓಖಿ ಚಂಡಮಾರುತ ಅಪ್ಪಳಿಸಿದ ನಂತರ ನಾಪತ್ತೆಯಾಗಿರುವವರ ಅಧಿಕೃತ ಸಂಖ್ಯೆಯನ್ನು ಎರಡೂ ರಾಜ್ಯಗಳು ಇನ್ನೂ ನೀಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಪ್ರತಿ ಮನೆಗೂ ತೆರಳಿ ಪರಿಶೀಲಿಸಲಾಗುತ್ತಿದ್ದು, ಪರಿಶೀಲನೆ ಕಾರ್ಯ ಮುಗಿದ ನಂತರ ಎಷ್ಟು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಓಖಿ ಚಂಡಮಾರುತದ ಸುಳಿಗೆ ಸಿಲುಕಿದ ನೂರಾರು ಮೀನುಗಾರರು ಸಮುದ್ರದ ನಡುವೆಯೇ ದಿನ ಕಳೆಯುತ್ತಿದ್ದು, ಹಲವರನ್ನು ರಕ್ಷಿಸಲಾಗಿದ್ದು, ಇನ್ನೂ ರಕ್ಷಣಾ ಕಾರ್ಯ ಮುಂದುವರೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT