ಸಾಂದರ್ಭಿಕ ಚಿತ್ರ 
ದೇಶ

ಓಖಿ ಚಂಡಮಾರುತ: 15 ದಿನ ಕಳೆಯಿತು, ಇನ್ನೂ 600 ಮೀನುಗಾರರು ನಾಪತ್ತೆ

ಓಖಿ ಚಂಡಮಾರುತ ತಮಿಳುನಾಡು ಹಾಗೂ ಕೇರಳ ಕರಾವಳಿಗೆ ಅಪ್ಪಳಿಸಿ 15 ದಿನ ಕಳೆದಿದೆ. ಆದರೆ ಎರಡೂ ರಾಜ್ಯಗಳ 600ಕ್ಕೂ ಹೆಚ್ಚು....

ನವದೆಹಲಿ: ಓಖಿ ಚಂಡಮಾರುತ ತಮಿಳುನಾಡು ಹಾಗೂ ಕೇರಳ ಕರಾವಳಿಗೆ ಅಪ್ಪಳಿಸಿ 15 ದಿನ ಕಳೆದಿದೆ. ಆದರೆ ಎರಡೂ ರಾಜ್ಯಗಳ 600ಕ್ಕೂ ಹೆಚ್ಚು ಮೀನುಗಾರರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಗುರುವಾರ ಗೃಹ ಸಚಿವಾಲಯ ತಿಳಿಸಿದೆ.
ತಮಿಳುನಾಡಿನ 433 ಮೀನುಗಾರರು ಹಾಗೂ ಕೇರಳದ 186 ಮೀನುಗಾರರು ಇನ್ನೂ ನಾಪತ್ತೆಯಾಗಿದ್ದು, ಅವರ ಪತ್ತೆಯಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯೆ, ಡಿಸೆಂಬರ್ 2ರಂದು ಓಖಿ ಚಂಡಮಾರುತ ಅಪ್ಪಳಿಸಿದ ನಂತರ ನಾಪತ್ತೆಯಾಗಿರುವವರ ಅಧಿಕೃತ ಸಂಖ್ಯೆಯನ್ನು ಎರಡೂ ರಾಜ್ಯಗಳು ಇನ್ನೂ ನೀಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಪ್ರತಿ ಮನೆಗೂ ತೆರಳಿ ಪರಿಶೀಲಿಸಲಾಗುತ್ತಿದ್ದು, ಪರಿಶೀಲನೆ ಕಾರ್ಯ ಮುಗಿದ ನಂತರ ಎಷ್ಟು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಓಖಿ ಚಂಡಮಾರುತದ ಸುಳಿಗೆ ಸಿಲುಕಿದ ನೂರಾರು ಮೀನುಗಾರರು ಸಮುದ್ರದ ನಡುವೆಯೇ ದಿನ ಕಳೆಯುತ್ತಿದ್ದು, ಹಲವರನ್ನು ರಕ್ಷಿಸಲಾಗಿದ್ದು, ಇನ್ನೂ ರಕ್ಷಣಾ ಕಾರ್ಯ ಮುಂದುವರೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT