ಶಂಭುಲಾಲ್ 
ದೇಶ

ರಾಜಸ್ಥಾನ ಹತ್ಯೆ ಪ್ರಕರಣ: ಆರೋಪಿ ಶಂಭುಲಾಲ್ ಪತ್ನಿ ಖಾತೆಗೆ ವಿವಿಧೆಡೆಗಳಿಂದ 3 ಲಕ್ಷ ರೂ. ನೆರವು

ರಾಜಸ್ಥಾನದಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿ ಸುಟ್ಟುಹಾಕಿದ್ದ ಪ್ರಕರಣದ ಆರೋಪಿ ಶಂಭುಲಾಲ್ ಪತ್ನಿಯ ಖಾತೆಗೆ ದೇಶದ ವಿವಿಧ ಭಾಗಗಳಿಂದ ಒಟ್ಟು 3 ಲಕ್ಷ ರೂಪಾಯಿ ವರ್ಗಾವಣೆಯಾಗಿದೆ.

ಉದಯ್ ಪುರ: ರಾಜಸ್ಥಾನದಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿ ಸುಟ್ಟುಹಾಕಿದ್ದ ಪ್ರಕರಣದ ಆರೋಪಿ ಶಂಭುಲಾಲ್ ಪತ್ನಿಯ ಖಾತೆಗೆ ದೇಶದ ವಿವಿಧ ಭಾಗಗಳಿಂದ ಒಟ್ಟು 3 ಲಕ್ಷ ರೂಪಾಯಿ ವರ್ಗಾವಣೆಯಾಗಿದೆ.
ಶಂಭುಲಾಲ್ ಪಶ್ಚಿಮ ಬಂಗಾಳ ಮೂಲದ ಮುಸ್ಲಿಮ್ ವ್ಯಕ್ತಿಯನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಆರೋಪದಡಿ ಶಂಭುಲಾಲ್ ಬಂಧನಕ್ಕೊಳಗಾಗಿದ್ದಾನೆ. ಇತ್ತೀಚಿನ ಮಾಹಿತಿಯ ಪ್ರಕಾರ, ಶಂಭುಲಾಲ್ ಪತ್ನಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಖಾತೆಗೆ ದೇಶಾದ್ಯಂತ 516 ಜನರು ಒಟ್ಟು 3 ಲಕ್ಷ ರೂಪಾಯಿಗಳನ್ನು ಕಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬ್ಯಾಂಕ್ ಖಾತೆಯಿಂದ ಯಾವುದೇ ವಹಿವಾಟುಗಳು ನಡೆಯದಂತೆ ಗಮನಹರಿಸಲಾಗುತ್ತಿದ್ದು, ಖಾತೆಯ ವಹಿವಾಟುಗಳನ್ನು ನಿರ್ಬಂಧಿಸುವುದಕ್ಕೂ ಮುನ್ನವೇ 3 ಲಕ್ಷ ರೂಪಾಯಿ ಜಮೆಯಾಗಿದೆ, ಯಾರೆಲ್ಲಾ ಈ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಉದಯ್ ಪುರದ ಐಜಿ ತಿಳಿಸಿದ್ದಾರೆ. 
ಇದೇ ವೇಳೆ ಉದಯ್ ಪುರದ ಸುತ್ತಮುತ್ತಲ ಪ್ರದೇಶಗಳಲ್ಲಿ ಹಿಂದೂ ಸಂಘಟನೆಗಳು ಶಂಭುಲಾಲ್ ಪರವಾಗಿ ರ್ಯಾಲಿ ನಡೆಸಲು ಉದ್ದೇಶಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 144 ನ್ನು ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT