ಸಂಗ್ರಹ ಚಿತ್ರ 
ದೇಶ

ವಿದ್ಯಾರ್ಥಿನಿಯನ್ನು ತಬ್ಬಿಕೊಂಡ ವಿದ್ಯಾರ್ಥಿಗೆ ಶಾಲೆಯಿಂದ ಉಚ್ಛಾಟನೆ ಶಿಕ್ಷೆ

ಸ್ಪರ್ಧೆಯಲ್ಲಿ ಗೆದ್ದ ವಿದ್ಯಾರ್ಥಿನಿಯನ್ನು ತಬ್ಬಿಕೊಂಡಿದ್ದಕ್ಕೆ 12ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಹೊರಹಾಕಿರುವ ಘಟನೆ...

ತಿರುವನಂತಪುರಂ: ಸ್ಪರ್ಧೆಯಲ್ಲಿ ಗೆದ್ದ ವಿದ್ಯಾರ್ಥಿನಿಯನ್ನು ತಬ್ಬಿಕೊಂಡಿದ್ದಕ್ಕೆ 12ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಹೊರಹಾಕಿರುವ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. 
ಈ ಸಂಬಂಧ ಉಚ್ಛಾಟನೆಗೊಂಡಿರುವ 12ನೇ ತರಗತಿ ವಿದ್ಯಾರ್ಥಿಯ ಪೋಷಕರು ಮುಕ್ಕೋಳಂ ನ ಸೆಂಟ್ ಥಾಮಸ್ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿಯ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ತೀರ್ಮನಿಸಿದ್ದಾರೆ. 
ಜೂಲೈ 21ರಂದು ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯೊಂದಿಗಿನ ಫೋಟೋವನ್ನು ವಿದ್ಯಾರ್ಥಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡುವ ಮೂಲಕ ಶಾಲೆಯ ಶಿಸ್ತಿನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು ಈ ಸಂಬಂಧ ಆತನನ್ನು ಶಾಲೆಯಿಂದ ಹೊರಹಾಕಲಾಗಿದೆ ಎಂದು ಶಾಲೆಯ ಕಾರ್ಯದರ್ಶಿ ರಾಜನ್ ವರ್ಗೀಸ್ ಹೇಳಿದ್ದಾರೆ. 
ಈ ಪ್ರಕರಣ ಸಂಬಂಧ ಕೇರಳ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ ವಿದ್ಯಾಭ್ಯಾಸ ಮುಂದುವರಿಸಲು ವಿದ್ಯಾರ್ಥಿಗೆ ಶಾಲೆಗೆ ಬರಲು ಅನುವು ಮಾಡಿಕೊಡಬೇಕು ಎಂದು ಅಕ್ಟೋಬರ್ 4ರಂದು ಆದೇಶಿಸಿತ್ತು. ಈ ಆದೇಶವನ್ನು ಶಾಲಾ ಆಡಳಿತ ಮಂಡಳಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಆಯೋಗ ಆದೇಶವನ್ನು ಹೈಕೋರ್ಟ್ ನ ಏಕಸದಸ್ಯ ಪೀಠ ಡಿಸೆಂಬರ್ 12 ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರು ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಮನವಿ ಮಾಡಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT