ಜಿಘ್ನೇಶ್ ಮೇವಾನಿ 
ದೇಶ

ಗುಜರಾತ್: ಚುನಾವಣೋತ್ತರ ಸಮೀಕ್ಷೆ 'ನಾನ್‌ಸೆನ್ಸ್'; ದಲಿತ ಮುಖಂಡ ಜಿಘ್ನೇಶ್ ಮೇವಾನಿ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳೆಲ್ಲಾ ಅಸಂಬದ್ಧ ಎಂದು ದಲಿತ ಮುಖಂಡ...

ವಡ್ಗಮ್(ಗುಜರಾತ್): ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳೆಲ್ಲಾ ಅಸಂಬದ್ಧ ಎಂದು ದಲಿತ ಮುಖಂಡ ಜಿಘ್ನೇಶ್ ಮೇವಾನಿ ಹೇಳಿದ್ದಾರೆ. 
ವಡ್ಗಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಜಿಘ್ನೇಶ್ ಮೇವಾನಿ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂಬ ಚುನಾವಣೋತ್ತರ ಸಮೀಕ್ಷೆಗಳು ನಕಲಿ ಮತ್ತು ಕಳಪೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸೋತು ಸುಣ್ಣವಾಗಲಿದೆ ಎಂದು ಹೇಳಿದ್ದಾರೆ. 
ಗುಜರಾತ್ ವಿಧಾಸನಭೆಯ ಎರಡನೇ ಹಂತದ ಮತದಾನ ಡಿಸೆಂಬರ್ 14ರಂದು ನಡೆದಿದ್ದು ನಂತರ ಪ್ರಕಟಗೊಂಡ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಬಹುಮತ ಸಾಧಿಸಲಿವೆ ಎಂದು ಹೇಳಿದ್ದವು. 
ಹಲವು ಮಾಧ್ಯಮಗಳು ನೀಡಿದ ಚುನಾವಣೋತ್ತರ ಸಮೀಕ್ಷೆಗಳಲ್ಲಿ 182 ಸೀಟುಗಳಲ್ಲಿ ಪೈಕಿ ಬಿಜೆಪಿ 100 ಗಡಿ ದಾಟಲಿದೆ ಎಂದು ಹೇಳಿದ್ದವು. ಇನ್ನು ಡಿಸೆಂಬರ್ 18ರಂದು ಎಣಿಕೆ ಕಾರ್ಯ ನಡೆಯಲಿದ್ದು ಸಮೀಕ್ಷೆಗಳ ಸತ್ಯಾಸತ್ಯತೆ ತಿಳಿಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT