ಸಂಗ್ರಹ ಚಿತ್ರ 
ದೇಶ

ಆರ್ ಕೆ ನಗರ ಉಪಚುನಾವಣೆಯಲ್ಲಿ ಮುಂದುವರೆದ ಅಕ್ರಮ; ಮತ್ತೆ 12 ಲಕ್ಷ ಹಣ ವಶಕ್ಕೆ

ಆರ್ ಕೆ ನಗರದಲ್ಲಿ ಆಯೋಜನೆಯಾಗಿರುವ ಉಪ ಚುನಾವಣೆಯಲ್ಲಿ ಚುನಾವಣಾ ಅಕ್ರಮ ಮುಂದುವರೆದಿದ್ದು, ಶನಿವಾರ ನಡೆದ ದಾಳಿಯಲ್ಲಿ ಮತದಾರರಿಗೆ ಹಂಚಲು ತಂದಿದ್ದ ಸುಮಾರು 12 ಲಕ್ಷ ರು.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ತವರು ಕ್ಷೇತ್ರ ಆರ್ ಕೆ ನಗರದಲ್ಲಿ ಆಯೋಜನೆಯಾಗಿರುವ ಉಪ ಚುನಾವಣೆಯಲ್ಲಿ ಚುನಾವಣಾ ಅಕ್ರಮ ಮುಂದುವರೆದಿದ್ದು, ಶನಿವಾರ ನಡೆದ ದಾಳಿಯಲ್ಲಿ  ಮತದಾರರಿಗೆ ಹಂಚಲು ತಂದಿದ್ದ ಸುಮಾರು 12 ಲಕ್ಷ ರು.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇದೇ ಡಿಸೆಂಬರ್ 21ರಂದು ಆರ್ ಕೆನಗರ ಉಪಚುನಾವಣೆಯ ಮತದಾನ ನಡೆಯಲಿದ್ದು, ಆಡಳಿತಾ ರೂಢ ಎಐಎಡಿಎಂಕೆ ಹಾಗೂ ಶಶಿಕಲಾ ಬಣದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಹೀಗಾಗಿ ಶತಾಯಗತಯಾ ಈ ಸ್ಥಾನವನ್ನು  ಗೆಲ್ಲಲ್ಲೇ ಬೇಕು ಎಂದು ರಾಜಕೀಯ ಪಕ್ಷಗಳು ಪಣ ತೊಟ್ಟಿದ್ದು, ಇದೇ ಕಾರಣಕ್ಕೆ ಮತದಾರರಿಗೆ ವ್ಯಾಪಕ ಪ್ರಮಾಣದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಕಳೆದ ಏಪ್ರಿಲ್ ನಲ್ಲೂ ಚುನಾವಣಾ ಆಯೋಗ ಮತದಾನವನ್ನು  ರದ್ದುಗೊಳಿಸಿ ಮುಂದೂಡಿತ್ತು.
ಇದೀಗ ಮತ್ತೆ ಆರ್ ಕೆನಗರದಲ್ಲಿ ವ್ಯಾಪಕ ಚುನಾವಣಾ ಅಕ್ರಮಗಳ ನಡೆಯುತ್ತಿದ್ದು, ನಿನ್ನೆ ಎರಡನೇ ಬಾರಿಗೆ ಆಯೋಗ ಅಧಿಕಾರಿಗಳು ಮತದಾರರಿಗೆ ಹಂಚಲು ತಂದಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಆರ್ ಕೆನಗರದ ಶಾಸಕಿಯಾಗಿದ್ದ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸಾವಿನ ಬಳಿಕ ಈ ಸ್ಥಾನ ತೆರವಾಗಿತ್ತು. ಇದೀಗ ಈ ಸ್ಥಾನಕ್ಕಾಗಿ ತಮಿಳುನಾಡಿನ ರಾಜಕೀಯ ಘಟಾನುಘಟಿ ನಾಯಕರೇ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT