ಸಂಗ್ರಹ ಚಿತ್ರ 
ದೇಶ

ಆರ್ ಕೆ ನಗರ ಉಪಚುನಾವಣೆಯಲ್ಲಿ ಮುಂದುವರೆದ ಅಕ್ರಮ; ಮತ್ತೆ 12 ಲಕ್ಷ ಹಣ ವಶಕ್ಕೆ

ಆರ್ ಕೆ ನಗರದಲ್ಲಿ ಆಯೋಜನೆಯಾಗಿರುವ ಉಪ ಚುನಾವಣೆಯಲ್ಲಿ ಚುನಾವಣಾ ಅಕ್ರಮ ಮುಂದುವರೆದಿದ್ದು, ಶನಿವಾರ ನಡೆದ ದಾಳಿಯಲ್ಲಿ ಮತದಾರರಿಗೆ ಹಂಚಲು ತಂದಿದ್ದ ಸುಮಾರು 12 ಲಕ್ಷ ರು.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ತವರು ಕ್ಷೇತ್ರ ಆರ್ ಕೆ ನಗರದಲ್ಲಿ ಆಯೋಜನೆಯಾಗಿರುವ ಉಪ ಚುನಾವಣೆಯಲ್ಲಿ ಚುನಾವಣಾ ಅಕ್ರಮ ಮುಂದುವರೆದಿದ್ದು, ಶನಿವಾರ ನಡೆದ ದಾಳಿಯಲ್ಲಿ  ಮತದಾರರಿಗೆ ಹಂಚಲು ತಂದಿದ್ದ ಸುಮಾರು 12 ಲಕ್ಷ ರು.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇದೇ ಡಿಸೆಂಬರ್ 21ರಂದು ಆರ್ ಕೆನಗರ ಉಪಚುನಾವಣೆಯ ಮತದಾನ ನಡೆಯಲಿದ್ದು, ಆಡಳಿತಾ ರೂಢ ಎಐಎಡಿಎಂಕೆ ಹಾಗೂ ಶಶಿಕಲಾ ಬಣದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಹೀಗಾಗಿ ಶತಾಯಗತಯಾ ಈ ಸ್ಥಾನವನ್ನು  ಗೆಲ್ಲಲ್ಲೇ ಬೇಕು ಎಂದು ರಾಜಕೀಯ ಪಕ್ಷಗಳು ಪಣ ತೊಟ್ಟಿದ್ದು, ಇದೇ ಕಾರಣಕ್ಕೆ ಮತದಾರರಿಗೆ ವ್ಯಾಪಕ ಪ್ರಮಾಣದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಕಳೆದ ಏಪ್ರಿಲ್ ನಲ್ಲೂ ಚುನಾವಣಾ ಆಯೋಗ ಮತದಾನವನ್ನು  ರದ್ದುಗೊಳಿಸಿ ಮುಂದೂಡಿತ್ತು.
ಇದೀಗ ಮತ್ತೆ ಆರ್ ಕೆನಗರದಲ್ಲಿ ವ್ಯಾಪಕ ಚುನಾವಣಾ ಅಕ್ರಮಗಳ ನಡೆಯುತ್ತಿದ್ದು, ನಿನ್ನೆ ಎರಡನೇ ಬಾರಿಗೆ ಆಯೋಗ ಅಧಿಕಾರಿಗಳು ಮತದಾರರಿಗೆ ಹಂಚಲು ತಂದಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಆರ್ ಕೆನಗರದ ಶಾಸಕಿಯಾಗಿದ್ದ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸಾವಿನ ಬಳಿಕ ಈ ಸ್ಥಾನ ತೆರವಾಗಿತ್ತು. ಇದೀಗ ಈ ಸ್ಥಾನಕ್ಕಾಗಿ ತಮಿಳುನಾಡಿನ ರಾಜಕೀಯ ಘಟಾನುಘಟಿ ನಾಯಕರೇ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT