ಸಂಗ್ರಹ ಚಿತ್ರ 
ದೇಶ

ಮತಯಂತ್ರ ತಿರುಚಲು 140 ಎಂಜಿನಿಯರ್ ಗಳ ನೇಮಕ: ಬಿಜೆಪಿ ವಿರುದ್ಧ ಹಾರ್ದಿಕ್ ಪಟೇಲ್ ಆರೋಪ

ಗುಜರಾತ್ ಚುನಾವಣೆಯಲ್ಲಿ ಮತಯಂತ್ರಗಳು ತಿರುಚಲು ಬಿಜೆಪಿ ಪಕ್ಷ 140 ಎಂಜಿನಿಯರ್ ಗಳ ನೇಮಕ ಮಾಡಿದೆ ಎಂದು ಪಾಟಿದಾರ್ ಹೋರಾಟದ ಮುಖಂಡ ಹಾರ್ದಿಕ್ ಪಟೇಲ್ ಆರೋಪಿಸಿದ್ದಾರೆ.

ಅಹಮದಾಬಾದ್: ಗುಜರಾತ್ ಚುನಾವಣೆಯಲ್ಲಿ ಮತಯಂತ್ರಗಳು ತಿರುಚಲು ಬಿಜೆಪಿ ಪಕ್ಷ 140 ಎಂಜಿನಿಯರ್ ಗಳ ನೇಮಕ ಮಾಡಿದೆ ಎಂದು ಪಾಟಿದಾರ್ ಹೋರಾಟದ ಮುಖಂಡ ಹಾರ್ದಿಕ್ ಪಟೇಲ್ ಆರೋಪಿಸಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಪ್ರಕಟವಾಗಲು ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಮುಖ್ಯಸ್ಥ ಹಾರ್ದಿಕ್ ಪಟೇಲ್ ಇಂತಹುದೊಂದು  ಗಂಭೀರ ಆರೋಪ ಮಾಡಿದ್ದಾರೆ. ಹಾರ್ದಿಕ್ ಆರೋಪಿಸಿರುವಂತೆ ಗುಜರಾತ್ ನಲ್ಲಿನ ಸುಮಾರು 5000 ಇವಿಎಂ ಮತಯಂತ್ರಗಳನ್ನು ಟ್ಯಾಂಪರ್ ಮಾಡಲು ಬಿಜೆಪಿಯ 140 ಎಂಜಿನಿಯರ್ ಗಳು ಕೆಲಸ ಮಾಡುತ್ತಿದ್ದಾರೆ ಎಂದು  ಹಾರ್ದಿಕ್ ಪಟೇಲ್ ಆರೋಪಿಸಿದ್ದಾರೆ. "ಅಹಮದಾಬಾದ್ ನ ಕಂಪನಿಯೊಂದು 140 ಎಂಜಿನಿಯರ್ ಗಳ ಮೂಲಕ 5,000 ಇವಿಎಂಗಳನ್ನು ಹ್ಯಾಕ್ ಮಾಡಲು ಸಜ್ಜಾಗಿದೆ," ಎಂದು ಹಾರ್ದಿಕ್ ಶನಿವಾರ ರಾತ್ರಿ ಟ್ವೀಟ್ ಮಾಡಿದ್ದಾರೆ. 
ಹಾರ್ದಿಕ್ ಆರೋಪ ತಳ್ಳಿ ಹಾಕಿದ ಜಿಲ್ಲಾಡಳಿತ
ಇನ್ನು ಹಾರ್ದಿಕ್ ಪಟೇಲ್ ಮಾಡಿರುವ ಆರೋಪವನ್ನು ಅಹಮದಾಬಾದ್ ಜಿಲ್ಲಾಧಿಕಾರಿ ಅವಂತಿಕಾ ಸಿಂಗ್ ತಳ್ಳಿ ಹಾಕಿದ್ದಾರೆ. ಈ ಆರೋಪ ಆಧಾರ ರಹಿತ ಎಂದು ಅವರು ಹೇಳಿದ್ದು, ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಬೇಕಿದ್ದರೂ  ಅದು ಚುನಾವಣಾ ಆಯೋಗವೇ ನೀಡಬೇಕು ಎಂದು ಹೇಳಿದ್ದಾರೆ. ಅಂತೆಯೇ ಇದೆಲ್ಲಾ ಆಧಾರ ರಹಿತ ಆರೋಪಗಳು. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅನಿಸುತ್ತಿಲ್ಲ. ಒಂದೊಮ್ಮೆ ಸ್ಪಷ್ಟನೆ ನೀಡಬೇಕಿದ್ದರೆ ಚುನಾವಣಾ  ಆಯೋಗವೇ ಸ್ಪಷ್ಟನೆ ನೀಡಬೇಕು" ಎಂದು ಅವರು ಹೇಳಿದ್ದಾರೆ.
ಇದರ ಬೆನ್ನಲ್ಲೇ ನಿನ್ನೆ ಸಂಜೆ ಪ್ರತಿಕ್ರಿಯೆ ನೀಡಿರುವ ಹಾರ್ದಿಕ್, "ಎಟಿಎಂಗಳನ್ನು ಹ್ಯಾಕ್ ಮಾಡಬಹುದು. ಹೀಗಾಗಿ ಇವಿಎಂಗಳನ್ನೂ ಹ್ಯಾಕ್ ಮಾಡಬಹುದು. ಒಂದೊಮ್ಮೆ ಯಾವುದೇ ಕ್ಷೇತ್ರಗಳಲ್ಲಿ 1,200 ರಿಂದ 1,500 ಮತಗಳಿಂದ  ಜಯ ಸಾಧಿಸಿದಲ್ಲಿ, ಅಲ್ಲಿ ಇವಿಎಂಗಳನ್ನು ಬಳಸಲಾಗಿರುತ್ತದೆ. ಪಾರದರ್ಶಕ ಚುನಾವಣೆ ನಡೆದರೆ ಬಿಜೆಪಿಗೆ ಸೋಲು ಕಂಡಿತ," ಎಂದು ಹೇಳಿದ್ದಾರೆ.
ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಹಾರ್ದಿಕ್ ಅವರ ಆರೋಪಗಳು ಅವರ ಸೋಲಿನ ಭಯವನ್ನು ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT