ಸಂಗ್ರಹ ಚಿತ್ರ 
ದೇಶ

ಗೆಲ್ಲದೇ ಇರಬಹುದು, ಆದರೆ ಬಿಜೆಪಿಗೆ ಪ್ರಬಲ ಹೊಡೆತ ನೀಡಿದ್ದೇವೆ: ರಾಹುಲ್ ಗಾಂಧಿ

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಇರಬಹುದು. ಆದರೆ ಬಿಜೆಪಿ ಪಕ್ಷಕ್ಕೆ ಮರೆಯಲಾಗದ ಪ್ರಬಲ ಹೊಡೆತ ನೀಡಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಇರಬಹುದು. ಆದರೆ ಬಿಜೆಪಿ ಪಕ್ಷಕ್ಕೆ ಮರೆಯಲಾಗದ ಪ್ರಬಲ ಹೊಡೆತ ನೀಡಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿ ಹೇಳಿದ್ದಾರೆ.
ಗುಜರಾತ್ ಚುನಾವಣಾ ಫಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನೂತನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಚುನಾವಣಾ ಫಲಿತಾಂಶದ ಮೂಲಕ ಗುಜರಾತ್ ಜನತೆ ಮೋದಿ ಮತ್ತು  ಅವರ ತಂಡಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಗುಜರಾತ್ ಮಾದರಿ ಕುರಿತ ಅವರ ಕೋಪವನ್ನು ಚುನಾವಣೆಯಲ್ಲಿ ಜನತೆ ಹೊರ ಹಾಕಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ನಾವು ಗುಜರಾತ್ ಆಗಮಿಸಿದ್ದಾಗ, ಅವರು ನಿಮ್ಮಿಂದ  ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂಬ ಧಾಟಿಯಲ್ಲಿ ನೋಡಿದ್ದರು. ಆದರೆ ನಮ್ಮ ಪಕ್ಷದ ಕಾರ್ಯಕರ್ತರು ಹಗಲು ರಾತ್ರಿ ಶ್ರಮಿಸಿದರು. ನಮ್ಮ ಶ್ರಮ ಇಂದು ಗುಜುರಾತ್ ಚುನಾವಣಾ ಫಲಿಂತಾಶದಲ್ಲಿ ಗೋಚರಿಸಿದೆ.
ಬಿಜೆಪಿಯನ್ನು ಅಲುಗಾಡಿಸಲು ಸಾಧ್ಯವೇ ಇಲ್ಲ ಎಂದು ಬೀಗುತ್ತಿದ್ದ ಪ್ರಧಾನಿ ಮೋದಿ ತಮ್ಮ ತವರಿನಲ್ಲೇ ಗೆಲುವಿಗಾಗಿ ಹರಸಾಹಸಪಡುವ ಸ್ಥಿತಿ ನಿರ್ಮಾಣವಾಗಿತ್ತು. ಗುಜರಾತ್ ಚುನಾವಣಾ ಫಲಿತಾಂಶ ಬಿಜೆಪಿಗೆ ಪ್ರಬಲ  ಹೊಡೆತವಾಗಿದ್ದು, ಇದು ಬಿಜೆಪಿ ಪತನದ ಆರಂಭ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಅಂತೆಯೇ ಗುಜರಾತ್ ನಲ್ಲಿ ನಾವು ಸೋತಿರಬಹುದು. ಆದರೆ ಫಲಿತಾಂಶದಿಂದ ನಮಗೆ ನಿರಾಶೆಯಾಗಿಲ್ಲ. ರಾಜ್ಯದಲ್ಲಿನ ಕಾರ್ಯಕರ್ತ ಶ್ರಮ ಖುಷಿ ನೀಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಶ್ರಮವಹಿಸಿ ಪಕ್ಷ ಸಂಘಟನೆ  ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT