ಸಂಗ್ರಹ ಚಿತ್ರ 
ದೇಶ

ಗೆಲ್ಲದೇ ಇರಬಹುದು, ಆದರೆ ಬಿಜೆಪಿಗೆ ಪ್ರಬಲ ಹೊಡೆತ ನೀಡಿದ್ದೇವೆ: ರಾಹುಲ್ ಗಾಂಧಿ

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಇರಬಹುದು. ಆದರೆ ಬಿಜೆಪಿ ಪಕ್ಷಕ್ಕೆ ಮರೆಯಲಾಗದ ಪ್ರಬಲ ಹೊಡೆತ ನೀಡಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೇ ಇರಬಹುದು. ಆದರೆ ಬಿಜೆಪಿ ಪಕ್ಷಕ್ಕೆ ಮರೆಯಲಾಗದ ಪ್ರಬಲ ಹೊಡೆತ ನೀಡಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿ ಹೇಳಿದ್ದಾರೆ.
ಗುಜರಾತ್ ಚುನಾವಣಾ ಫಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನೂತನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಚುನಾವಣಾ ಫಲಿತಾಂಶದ ಮೂಲಕ ಗುಜರಾತ್ ಜನತೆ ಮೋದಿ ಮತ್ತು  ಅವರ ತಂಡಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಗುಜರಾತ್ ಮಾದರಿ ಕುರಿತ ಅವರ ಕೋಪವನ್ನು ಚುನಾವಣೆಯಲ್ಲಿ ಜನತೆ ಹೊರ ಹಾಕಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ನಾವು ಗುಜರಾತ್ ಆಗಮಿಸಿದ್ದಾಗ, ಅವರು ನಿಮ್ಮಿಂದ  ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂಬ ಧಾಟಿಯಲ್ಲಿ ನೋಡಿದ್ದರು. ಆದರೆ ನಮ್ಮ ಪಕ್ಷದ ಕಾರ್ಯಕರ್ತರು ಹಗಲು ರಾತ್ರಿ ಶ್ರಮಿಸಿದರು. ನಮ್ಮ ಶ್ರಮ ಇಂದು ಗುಜುರಾತ್ ಚುನಾವಣಾ ಫಲಿಂತಾಶದಲ್ಲಿ ಗೋಚರಿಸಿದೆ.
ಬಿಜೆಪಿಯನ್ನು ಅಲುಗಾಡಿಸಲು ಸಾಧ್ಯವೇ ಇಲ್ಲ ಎಂದು ಬೀಗುತ್ತಿದ್ದ ಪ್ರಧಾನಿ ಮೋದಿ ತಮ್ಮ ತವರಿನಲ್ಲೇ ಗೆಲುವಿಗಾಗಿ ಹರಸಾಹಸಪಡುವ ಸ್ಥಿತಿ ನಿರ್ಮಾಣವಾಗಿತ್ತು. ಗುಜರಾತ್ ಚುನಾವಣಾ ಫಲಿತಾಂಶ ಬಿಜೆಪಿಗೆ ಪ್ರಬಲ  ಹೊಡೆತವಾಗಿದ್ದು, ಇದು ಬಿಜೆಪಿ ಪತನದ ಆರಂಭ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಅಂತೆಯೇ ಗುಜರಾತ್ ನಲ್ಲಿ ನಾವು ಸೋತಿರಬಹುದು. ಆದರೆ ಫಲಿತಾಂಶದಿಂದ ನಮಗೆ ನಿರಾಶೆಯಾಗಿಲ್ಲ. ರಾಜ್ಯದಲ್ಲಿನ ಕಾರ್ಯಕರ್ತ ಶ್ರಮ ಖುಷಿ ನೀಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಶ್ರಮವಹಿಸಿ ಪಕ್ಷ ಸಂಘಟನೆ  ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT