ಉದ್ಧವ್ ಠಾಕ್ರೆ 
ದೇಶ

ಗುಜರಾತ್ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡ ಶಿವಸೇನೆಯ ಎಲ್ಲಾ 42 ಅಭ್ಯರ್ಥಿಗಳು

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹಿಂದಿನ ಚುನಾವಣೆಗಿಂತ ಕಡಿಮೆ ಸ್ಥಾನವನ್ನು ಪಡೆದು ಅಧಿಕಾರಕ್ಕೇರಿರುವ ಬಿಜೆಪಿಯನ್ನು ಎನ್ ಡಿಎ ಮಿತ್ರ ಪಕ್ಷ ಶಿವಸೇನೆ ಟೀಕಿಸುತ್ತಿದೆ...

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹಿಂದಿನ ಚುನಾವಣೆಗಿಂತ ಕಡಿಮೆ ಸ್ಥಾನವನ್ನು ಪಡೆದು ಅಧಿಕಾರಕ್ಕೇರಿರುವ ಬಿಜೆಪಿಯನ್ನು ಎನ್ ಡಿಎ ಮಿತ್ರ ಪಕ್ಷ ಶಿವಸೇನೆ ಟೀಕಿಸುತ್ತಿದೆ. ಆದರೆ ಶಿವಸೇನೆ ಕಣಕ್ಕಿಳಿಸಿದ್ದ ಎಲ್ಲಾ 42 ಅಭ್ಯರ್ಥಿಗಳು ಠೇವಣಿಯನ್ನೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. 
ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿ, ಒಟ್ಟಾರೆ ಚಲಾವಣೆಯಾದ ಮತಗಳ ಪೈಕಿ 6 ನೇ ಒಂದರಷ್ಟು ಮತಗಳನ್ನು ಪಡೆಯಲು ವಿಫಲವಾದರೆ ಆ ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ಪಾವತಿಸಿದ್ದ ಠೇವಣಿ ಹಣ ವಾಪಸ್ ಸಿಗುವುದಿಲ್ಲ. 
ಶಿವಸೇನೆಯ ಎಲ್ಲಾ ಅಭ್ಯರ್ಥಿಗಳು ಒಟ್ಟು 33,893 ಮತಗಳನ್ನು ಪಡೆದಿದ್ದು ಲಿಂಬಾಯತ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿವಸೇನೆಯ ಸಾಮ್ರಾಟ್ ಪಾಟೀಲ್ ಅತಿ ಹೆಚ್ಚು ಅಂಡರೆ 4,075 ಮತಗಳನ್ನು ಪಡೆದಿದ್ದಾರೆ. 2007 ರಲ್ಲಿಯೂ ಸಹ ಗುಜರಾತ್ ನಲ್ಲಿ ಶಿವಸೇನೆಯಿಂದ ಸ್ಪರ್ಧಿಸಿದ್ದ 33 ಅಭ್ಯರ್ಥಿಗಳು ಸೋತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT