ನರೇಂದ್ರ ಮೋದಿ-ಜಿಗ್ನೇಶ್ ಮೇವಾನಿ 
ದೇಶ

ಜನರನ್ನು ಮೂರ್ಖರನ್ನಾಗಿಸುವುದು ಬಿಟ್ಟು, ಮೋದಿ ಹಿಮಾಲಯಕ್ಕೆ ತೆರಳಿ ಪೂಜೆ ಮಾಡಲಿ: ಜಿಗ್ನೇಶ್ ಮೇವಾನಿ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕನಾಗಿ ಆಯ್ಕೆಯಾಗಿರುವ ದಲಿತ ಮುಖಂಡ ಜಿಗ್ನೇಶ್...

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕನಾಗಿ ಆಯ್ಕೆಯಾಗಿರುವ ದಲಿತ ಮುಖಂಡ ಜಿಗ್ನೇಶ್ ಮೇವಾನಿ ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿ ಇದೀಗ ವಿವಾದಕ್ಕೆ ಗುರಿಯಾಗಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಈಗ 70ರ ಗಡಿ ತಲುಪುತ್ತಿರುವ ಮುದುಕ. ಅವರು ಸುಮ್ಮನೆ ಯುವಕ ಎಂದು ಹೇಳಿಕೊಳ್ಳುತ್ತಾರೆ. ನಾವು ಯುವಕರು ಈಗ ಮುನ್ನಡೆಯಬೇಕಾಗಿದೆ. ಮೋದಿ ಹಿಮಾಲಯಕ್ಕೆ ತೆರಳಿ ಅಲ್ಲಿಯೇ ಯಾವುದೋ ರಾಮಮಂದಿರವನ್ನು ನೋಡಿಕೊಂಡು ಅರ್ಚಕನಾಗಿ ಗಂಟೆ ಬಾರಿಸಿಕೊಂಡು ಇರಲಿ ಎಂದು ಟೈಮ್ಸ್ ನೌಗೆ ನೀಡಿದ ಸಂದರ್ಶನದಲ್ಲಿ ಜಿಗ್ನೇಶ್ ಮೇವಾನಿ ಮೋದಿ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. 
ನಾನು ಗೆದ್ದಿರುವ ವಡ್ಗಾಮ್ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ಕೈಗೊಳ್ಳಲಿದ್ದು ನಂತರ ಎಲ್ಲ ಕಡೆಯಿಂದಲೂ ಪ್ರತಿಭಟನೆಗಳನ್ನು ನಡೆಸಲಾಗುವುದು. ವಿಧಾನಸಭೆಯಲ್ಲೂ ನಾವು ದನಿ ಎತ್ತಲಿದ್ದೇವೆ ಎಂದು ನೇರವಾಗಿಯೇ ಬಿಜೆಪಿ ಹಾಗೂ ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ. 
ಪ್ರಧಾನಿ ಮೋದಿ ವಿರುದ್ಧ ಹಗುರವಾಗಿ ಮಾತನಾಡಿರುವ ಜಿಗ್ನೇಶ್ ಮೇವಾನಿಗೆ ಭಾರೀ ವಿರೋಧ ವ್ಯಕ್ತವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮೇವಾನಿ ವಿರುದ್ಧ ಕಟುಟೀಕೆಗಳನ್ನು ಮಾಡಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT