ಧಾಳಿಗೊಳಗಾದ ರೈಲ್ವೇ ನಿಲ್ದಾಣ 
ದೇಶ

ಬಿಹಾರ ರೈಲ್ವೆ ನಿಲ್ದಾಣದ ಮೇಲೆ ನಕ್ಸಲರ ದಾಳಿ, ಇಬ್ಬರು ಅಧಿಕಾರಿಗಳ ಅಪಹರಣ

ಬಿಹಾರದಲ್ಲಿ ಮತ್ತೆ ನಕ್ಸಲರ ದಾಳಿ ಮುಂದುವರೆದಿದ್ದು, ಮಸೂದನ್ ರೈಲ್ವೆ ನಿಲ್ದಾಣದ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ ನಕ್ಸಲರು ಇಬ್ಬರು ಅಧಿಕಾರಿಗಳನ್ನು ಅಪಹರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ: ಬಿಹಾರದಲ್ಲಿ ಮತ್ತೆ ನಕ್ಸಲರ ದಾಳಿ ಮುಂದುವರೆದಿದ್ದು, ಮಸೂದನ್ ರೈಲ್ವೆ ನಿಲ್ದಾಣದ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ ನಕ್ಸಲರು ಇಬ್ಬರು ಅಧಿಕಾರಿಗಳನ್ನು ಅಪಹರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಮಂಗಳವಾರ ರಾತ್ರಿ ರೈಲ್ವೇ ನಿಲ್ದಾಣದ ಮೇಲೆ ದಾಳಿ ನಡೆಸಿದ ನಕ್ಸಲರು, ನಿಲ್ದಾಣದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದು, ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಅಪಹರಣ  ಮಾಡಿದ್ದಾರೆ ಎನ್ನಲಾಗಿದೆ. ಅಧಿಕಾರಗಳು ಮಾಹಿತಿ ನೀಡಿರುವಂತೆ ನಿಲ್ದಾಣದ ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಮತ್ತು ರೈಲ್ವೆ ನಿಲ್ದಾಣದಲ್ಲಿದ್ದ ಮತ್ತೋರ್ವ ಅಧಿಕಾರಿಯನ್ನು ನಕ್ಸಲರು ಅಪಹರಣಗೈದಿದ್ದಾರೆ ಎಂದು ಹೇಳಲಾಗಿದೆ.
ಇಲ್ಲಿನ ವಿಭಾಗೀಯ ರೈಲ್ವೆ ಅಧಿಕಾರಿ ಮಾಲ್ದಾ ಅವರಿಗೆ ಅಪಹರಣಕ್ಕೊಳಗಾಗಿರುವ ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್‍‍ನಿಂದ ಕರೆ ಬಂದಿದೆ. ಮಸೂದನ್‍ ನಲ್ಲಿ ರೈಲು ಸಂಚರಿಸಿದರೆ ಅಪಹರಿಸಿರುವ ರೈಲ್ವೆ ಅಧಿಕಾರಿಗಳನ್ನು ಹತ್ಯೆ  ಮಾಡುವುದಾಗಿ ನಕ್ಸಲರು ಬೆದರಿಕೆಯೊಡ್ಡಿದ್ದಾರೆ ಎಂದು ಮಾಲ್ದಾ ಹೇಳಿದ್ದಾರೆ. ಆದಾಗ್ಯೂ, ಪ್ರಯಾಣಿಕರು ಬೇರೆ ದಾರಿಯಾಗಿ ಪ್ರಯಾಣ ಕೈಗೊಳ್ಳಬೇಕೆಂದು ರೈಲ್ವೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT