ಧಾಳಿಗೊಳಗಾದ ರೈಲ್ವೇ ನಿಲ್ದಾಣ 
ದೇಶ

ಬಿಹಾರ ರೈಲ್ವೆ ನಿಲ್ದಾಣದ ಮೇಲೆ ನಕ್ಸಲರ ದಾಳಿ, ಇಬ್ಬರು ಅಧಿಕಾರಿಗಳ ಅಪಹರಣ

ಬಿಹಾರದಲ್ಲಿ ಮತ್ತೆ ನಕ್ಸಲರ ದಾಳಿ ಮುಂದುವರೆದಿದ್ದು, ಮಸೂದನ್ ರೈಲ್ವೆ ನಿಲ್ದಾಣದ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ ನಕ್ಸಲರು ಇಬ್ಬರು ಅಧಿಕಾರಿಗಳನ್ನು ಅಪಹರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ: ಬಿಹಾರದಲ್ಲಿ ಮತ್ತೆ ನಕ್ಸಲರ ದಾಳಿ ಮುಂದುವರೆದಿದ್ದು, ಮಸೂದನ್ ರೈಲ್ವೆ ನಿಲ್ದಾಣದ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ ನಕ್ಸಲರು ಇಬ್ಬರು ಅಧಿಕಾರಿಗಳನ್ನು ಅಪಹರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಮಂಗಳವಾರ ರಾತ್ರಿ ರೈಲ್ವೇ ನಿಲ್ದಾಣದ ಮೇಲೆ ದಾಳಿ ನಡೆಸಿದ ನಕ್ಸಲರು, ನಿಲ್ದಾಣದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದು, ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಅಪಹರಣ  ಮಾಡಿದ್ದಾರೆ ಎನ್ನಲಾಗಿದೆ. ಅಧಿಕಾರಗಳು ಮಾಹಿತಿ ನೀಡಿರುವಂತೆ ನಿಲ್ದಾಣದ ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಮತ್ತು ರೈಲ್ವೆ ನಿಲ್ದಾಣದಲ್ಲಿದ್ದ ಮತ್ತೋರ್ವ ಅಧಿಕಾರಿಯನ್ನು ನಕ್ಸಲರು ಅಪಹರಣಗೈದಿದ್ದಾರೆ ಎಂದು ಹೇಳಲಾಗಿದೆ.
ಇಲ್ಲಿನ ವಿಭಾಗೀಯ ರೈಲ್ವೆ ಅಧಿಕಾರಿ ಮಾಲ್ದಾ ಅವರಿಗೆ ಅಪಹರಣಕ್ಕೊಳಗಾಗಿರುವ ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್‍‍ನಿಂದ ಕರೆ ಬಂದಿದೆ. ಮಸೂದನ್‍ ನಲ್ಲಿ ರೈಲು ಸಂಚರಿಸಿದರೆ ಅಪಹರಿಸಿರುವ ರೈಲ್ವೆ ಅಧಿಕಾರಿಗಳನ್ನು ಹತ್ಯೆ  ಮಾಡುವುದಾಗಿ ನಕ್ಸಲರು ಬೆದರಿಕೆಯೊಡ್ಡಿದ್ದಾರೆ ಎಂದು ಮಾಲ್ದಾ ಹೇಳಿದ್ದಾರೆ. ಆದಾಗ್ಯೂ, ಪ್ರಯಾಣಿಕರು ಬೇರೆ ದಾರಿಯಾಗಿ ಪ್ರಯಾಣ ಕೈಗೊಳ್ಳಬೇಕೆಂದು ರೈಲ್ವೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!