ಮೋದಿ-ಅಮಿತ್ ಶಾ 
ದೇಶ

ಗುಜರಾತ್‌ನಲ್ಲಿ ಬಿಜೆಪಿಯ '150 ಮಿಷನ್' ಫ್ಲಾಪ್ ಶೋ: ಶಿವಸೇನೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ತವರು ರಾಜ್ಯ ಗುಜರಾತ್ ನಲ್ಲಿ 150 ಮಿಷನ್ ಫ್ಲಾಪ್ ಆಗಿದೆ ಎಂದು ಶಿವಸೇನೆ ಲೇವಡಿ...

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ತವರು ರಾಜ್ಯ ಗುಜರಾತ್ ನಲ್ಲಿ 150 ಮಿಷನ್ ಫ್ಲಾಪ್ ಆಗಿದೆ ಎಂದು ಶಿವಸೇನೆ ಲೇವಡಿ ಮಾಡಿದೆ.
ಶಿವಸೇನೆಯ ಸಾಮ್ನಾ ಮುಖಪುಟದಲ್ಲಿ ಬರೆದುಕೊಂಡಿದ್ದು ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಯಾವ ಮಟ್ಟಕ್ಕೆ ಬೇಕಾದರೂ ಹೋಗಬಹುದು. ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ ಎಂದು ಶಿವಸೇನೆ ಹೇಳಿದೆ. 
ಗುಜರಾತ್ ನಲ್ಲಿ 150 ಮಿಷನ್ ಗುರಿ ಹೊಂದಿದ್ದ ಬಿಜೆಪಿ ಕೇವಲ 99 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗಿದೆ. 150 ಮಿಷನ್ ಗಾಗಿ ನಡೆಸಿದ ಕಸರತ್ತುಗಳೆಲ್ಲಾ ನೆಲಕಚ್ಚಿವೆ. ಇದು ಬಿಜೆಪಿಯ ಪತನವನ್ನು ಸೂಚಿಸುತ್ತಿದೆ ಎಂದು ಶಿವಸೇನೆ ವಾಗ್ದಾಳಿ ನಡೆಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಅಭಿಯಾನಕ್ಕೆ ಬಿಜೆಪಿಗೆ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಹೆಚ್ಚು ಮತಗಳು ಸಿಕ್ಕಿವೆ. ಪ್ರಧಾನ ಮೋದಿ ತಮ್ಮ ಪ್ರಚಾರ ವೇಳೆ ವಿಕಾಸ್(ಅಭಿವೃದ್ಧಿ) ಕುರಿತಾಗಿ ಮಾತನಾಡುತ್ತಾರೆ. ಬರೀ ನಗರ ಪ್ರದೇಶಗಳು ಅಭಿವೃದ್ಧಿ ಪತದಲ್ಲಿ ನಡೆಯುತ್ತಿದ್ದರೆ ಗ್ರಾಮೀಣ ಪ್ರದೇಶಗಳು ಮಾತ್ರ ಇನ್ನು ಹಿಂದೆ ಉಳಿದಿವೆ ಎಂಬುದನ್ನು ಮೋದಿ ಮರೆತಿದ್ದಾರೆ ಎಂದು ಶಿವಸೇನೆ ಕುಟುಕಿದೆ. 
ಗುಜರಾತ್ ನಲ್ಲಿ ಕಳೆದ 22 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ರೈತಾಪಿ ಜನರ ಅಭಿವೃದ್ಧಿ ಕಡೆ ಗಮನವನ್ನು ಕೇಂದ್ರೀಕರಿಸುವಲ್ಲಿ ವಿಫಲವಾಗಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಗಣನೆಗೆ ತೆಗೆದುಕೊಂಡರೆ 2019ರ ಸಾರ್ವತ್ರಿಕ ಚುನಾವಣೆ ಕಾವು ಹೆಚ್ಚಾಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT