ಆರ್ ಕೆ ನಗರದಲ್ಲಿ ಮತಗಟ್ಟೆಗೆ ಆಗಮಿಸಿರುವ ಮತದಾರರು 
ದೇಶ

ಜಯಾ ಸ್ವಕ್ಷೇತ್ರದಲ್ಲಿ ಉಪಚುನಾವಣೆ: ಆರ್ ನಗರದಲ್ಲಿ ಮತದಾನ ಆರಂಭ

ತೀವ್ರ ಕುತೂಹಲ ಕೆರಳಿಸಿರುವ ಮತ್ತು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆನಗರ ಉಪಚುನಾವಣೆಯ ಮತದಾನ ಆರಂಭವಾಗಿದ್ದು, ಬೆಳಗ್ಗಿನಿಂದಲೇ ಆರ್ ಕೆ ನಗರದ ಮತದಾರರು ಸಾಲುಗಟ್ಟಿ ಮತದಾನ ಮಾಡುತ್ತಿದ್ದಾರೆ.

ಚೆನ್ನೈ: ತೀವ್ರ ಕುತೂಹಲ ಕೆರಳಿಸಿರುವ ಮತ್ತು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆನಗರ ಉಪಚುನಾವಣೆಯ ಮತದಾನ ಆರಂಭವಾಗಿದ್ದು,  ಬೆಳಗ್ಗಿನಿಂದಲೇ ಆರ್ ಕೆ ನಗರದ ಮತದಾರರು ಸಾಲುಗಟ್ಟಿ ಮತದಾನ ಮಾಡುತ್ತಿದ್ದಾರೆ.
ಮತದಾರರಿಗೆ ಹಣ ಹಂಚಿಕೆ, ರಾಜಕೀಯ ಪಕ್ಷಗಳ ಮಾರಾಮಾರಿಯಂತಹ ಪ್ರಕರಣಗಳು ದಾಖಲಾದ ಹಿನ್ನಲೆಯಲ್ಲಿ ಇಂದಿನ ಮತದಾನ ಪ್ರಕ್ರಿಯೆಗೆ ಅಭೂತಪೂರ್ವ ಭದ್ರತೆ ಕಲ್ಪಿಸಲಾಗಿದೆ. ಹಿಂದೆಂದೂ ಕಂಡು ಕೇಳರಿಯದ  ರೀತಿಯಲ್ಲಿ ಈ ಹಿಂದೆ ಆರ್ ಕೆ ನಗರದಲ್ಲಿ ಭಾರಿ ಪ್ರಮಾಣದ ಚುನಾವಣಾ ಪ್ರಚಾರ ನಡೆದಿತ್ತು. ಜಯಾ ಸಾವಿನ ಬಳಿಕ ಇಬ್ಭಾಗವಾಗಿದ್ದ ಎಐಎಡಿಎಕೆ ಪಕ್ಷ ಮತ್ತೆ ಒಂದಾಗಿದೆಯಾದರೂ ಶಶಿಕಲಾ ಬಣವನ್ನು ಪಕ್ಷದಿಂದ ದೂರವಿಟ್ಟಿದೆ.  ಹೀಗಾಗಿ ಈ ಹಿಂದೆ ಇದ್ದ ಎದುರಾಳಿಗಳ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದ್ದು, ಡಿಎಂಕೆ, ಎಐಎಡಿಎಂಕೆ ಮತ್ತು ಶಶಿಕಲಾ ಬಣದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಪ್ರಮುಖವಾಗಿ ಈ ಚುನಾವಣೆಯನ್ನು ಜಯಲಲಿತಾ ಅವರ ಉತ್ತರಾಧಿಕಾರದಂತೆ ನೋಡಲಾಗುತ್ತಿದ್ದು, ಇದೇ ಕಾರಣಕ್ಕೆ ಶಶಿಕಲಾ ಬಣ ಹಾಗೂ ಪನ್ನೀರ್ ಸೆಲ್ವಂ ಹಾಗೂ ಸಿಎಂ ಪಳನಿಸ್ವಾಮಿ ಬಣ ಪ್ರತಿಷ್ಠೆಯಾಗಿ ಪರಿಗಣಿಸಿವೆ.
ಇದೇ ಡಿಸೆಂಬರ್ 24ರಂದು ಮತಎಣಿಕೆ ಕಾರ್ಯ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT