ಆರ್ ಕೆ ನಗರದಲ್ಲಿ ಮತಗಟ್ಟೆಗೆ ಆಗಮಿಸಿರುವ ಮತದಾರರು 
ದೇಶ

ಜಯಾ ಸ್ವಕ್ಷೇತ್ರದಲ್ಲಿ ಉಪಚುನಾವಣೆ: ಆರ್ ನಗರದಲ್ಲಿ ಮತದಾನ ಆರಂಭ

ತೀವ್ರ ಕುತೂಹಲ ಕೆರಳಿಸಿರುವ ಮತ್ತು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆನಗರ ಉಪಚುನಾವಣೆಯ ಮತದಾನ ಆರಂಭವಾಗಿದ್ದು, ಬೆಳಗ್ಗಿನಿಂದಲೇ ಆರ್ ಕೆ ನಗರದ ಮತದಾರರು ಸಾಲುಗಟ್ಟಿ ಮತದಾನ ಮಾಡುತ್ತಿದ್ದಾರೆ.

ಚೆನ್ನೈ: ತೀವ್ರ ಕುತೂಹಲ ಕೆರಳಿಸಿರುವ ಮತ್ತು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸ್ವಕ್ಷೇತ್ರ ಆರ್ ಕೆನಗರ ಉಪಚುನಾವಣೆಯ ಮತದಾನ ಆರಂಭವಾಗಿದ್ದು,  ಬೆಳಗ್ಗಿನಿಂದಲೇ ಆರ್ ಕೆ ನಗರದ ಮತದಾರರು ಸಾಲುಗಟ್ಟಿ ಮತದಾನ ಮಾಡುತ್ತಿದ್ದಾರೆ.
ಮತದಾರರಿಗೆ ಹಣ ಹಂಚಿಕೆ, ರಾಜಕೀಯ ಪಕ್ಷಗಳ ಮಾರಾಮಾರಿಯಂತಹ ಪ್ರಕರಣಗಳು ದಾಖಲಾದ ಹಿನ್ನಲೆಯಲ್ಲಿ ಇಂದಿನ ಮತದಾನ ಪ್ರಕ್ರಿಯೆಗೆ ಅಭೂತಪೂರ್ವ ಭದ್ರತೆ ಕಲ್ಪಿಸಲಾಗಿದೆ. ಹಿಂದೆಂದೂ ಕಂಡು ಕೇಳರಿಯದ  ರೀತಿಯಲ್ಲಿ ಈ ಹಿಂದೆ ಆರ್ ಕೆ ನಗರದಲ್ಲಿ ಭಾರಿ ಪ್ರಮಾಣದ ಚುನಾವಣಾ ಪ್ರಚಾರ ನಡೆದಿತ್ತು. ಜಯಾ ಸಾವಿನ ಬಳಿಕ ಇಬ್ಭಾಗವಾಗಿದ್ದ ಎಐಎಡಿಎಕೆ ಪಕ್ಷ ಮತ್ತೆ ಒಂದಾಗಿದೆಯಾದರೂ ಶಶಿಕಲಾ ಬಣವನ್ನು ಪಕ್ಷದಿಂದ ದೂರವಿಟ್ಟಿದೆ.  ಹೀಗಾಗಿ ಈ ಹಿಂದೆ ಇದ್ದ ಎದುರಾಳಿಗಳ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದ್ದು, ಡಿಎಂಕೆ, ಎಐಎಡಿಎಂಕೆ ಮತ್ತು ಶಶಿಕಲಾ ಬಣದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಪ್ರಮುಖವಾಗಿ ಈ ಚುನಾವಣೆಯನ್ನು ಜಯಲಲಿತಾ ಅವರ ಉತ್ತರಾಧಿಕಾರದಂತೆ ನೋಡಲಾಗುತ್ತಿದ್ದು, ಇದೇ ಕಾರಣಕ್ಕೆ ಶಶಿಕಲಾ ಬಣ ಹಾಗೂ ಪನ್ನೀರ್ ಸೆಲ್ವಂ ಹಾಗೂ ಸಿಎಂ ಪಳನಿಸ್ವಾಮಿ ಬಣ ಪ್ರತಿಷ್ಠೆಯಾಗಿ ಪರಿಗಣಿಸಿವೆ.
ಇದೇ ಡಿಸೆಂಬರ್ 24ರಂದು ಮತಎಣಿಕೆ ಕಾರ್ಯ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT