ಅರವಿಂದ್ ಕೇಜ್ರಿವಾಲ್ 
ದೇಶ

2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಸಂಚು: ಆಮ್ ಆದ್ಮಿ ಪಕ್ಷ

2 ಜಿ ಹಗರಣದ ತೀರ್ಪಿನ ಬಗ್ಗೆ ಆಮ್ ಆದ್ಮಿ ಪಕ್ಷ ಪ್ರತಿಕ್ರಿಯೆ ನೀಡಿದ್ದು, ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿದೆ.

ನವದೆಹಲಿ: 2 ಜಿ ಹಗರಣದ ತೀರ್ಪಿನ ಬಗ್ಗೆ ಆಮ್ ಆದ್ಮಿ ಪಕ್ಷ ಪ್ರತಿಕ್ರಿಯೆ ನೀಡಿದ್ದು, ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿದೆ. 
ತೀರ್ಪಿನ ಬಗ್ಗೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಬಿಐ ಹಗರಣದ ಆರೋಪಿಗಳ ಅಪರಾಧವನ್ನು ಸಾಬೀತುಪಡಿಸುವಲ್ಲಿ ವಿಫಲಗೊಂಡಿದೆ. ಸಿಬಿಐ ಏಕೆ ವಿಫಲಗೊಂಡಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಈಗ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. 
2ಜಿ ಹಗರಣ ದೇಶದ ಅತಿ ದೊಡ್ಡ ಹಗರಣ, ಯುಪಿಎ ಸರ್ಕಾರವನ್ನು ಜನರು ತಿರಸ್ಕರಿಸಿದ್ದೂ ಇದೇ ಕಾರಣಕ್ಕಾಗಿ. ಉದ್ದೇಶಪೂರ್ವಕವಾಗಿಯೇ ಸಿಬಿಐ ಈ ಪ್ರಕರಣದಲ್ಲಿ ದುರ್ಬಲ ವಾದ ಮಂಡಿಸಿದೆಯೇ, ಜನರಿಗೆ ಉತ್ತರ ಬೇಕಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT